newsics.com
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿಯನ್ನು ಬೆಂಗಳೂರು ಸೆಷನ್ ಕೋರ್ಟ್ ವಿಚಾರಣೆ ನಡೆಸಿತು. ಆದ್ರೆ ಇಂದು ಸಹ ನಟ ದರ್ಶನ್ಗೆ ಜಾಮೀನು ಸಿಗದೇ, ನಿರಾಸೆಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ.
ಹೌದು, ವಾದ ಮಂಡನೆಗೆ ಕಾಲಾವಕಾಶವನ್ನು ದರ್ಶನ್ ಪರ ವಕೀಲರು ಕೇಳಿದ ಕಾರಣದಿಂದಾಗಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ಪ್ರಕರಣದಲ್ಲಿ ಖುದ್ದು ಹಿರಿಯ ವಕೀಲರು ಸಿವಿ ನಾಗೇಶ್ ಅವರು ಬರಬೇಕಾಗಿದ್ದು, ಅವರು ಬರದೇ ಇರುವ ಕಾರಣಕ್ಕೆ ಅವರ ಸಹಾಯಕ ವಕೀಲರು ಪ್ರಕರಣದಲ್ಲಿ ಇನ್ನಷ್ಟು ದಿನದ ಕಾಲಾವಕಾಶವನ್ನು ಕೇಳಿದ್ದಾರೆ.
ಈ ಹಿಂದೆ, ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಪರ ವಕೀಲರು, ಎಸ್ಪಿಪಿ ಪ್ರಸನ್ನ ಅವರು ಆಕ್ಷೇಪಣೆ ಸಲ್ಲಿಸಲು ತಡ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಈಗ ಆಕ್ಷೇಪಣೆ ಸಲ್ಲಿಸಿದ ಮೇಲೆ ತಾವೇ ಈಗ ವಿಚಾರಣೆಯನ್ನು ಮುಂದಕ್ಕೆ ಹಾಕಿಸಿಕೊಂಡಿದ್ದಾರೆ.