newsics.com
ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಹಿರಿಯ ಚಿತ್ರಕಲಾವಿದ ವಿಜಯ ಸಿಂಧೂರ್ ಶನಿವಾರ ನಿಧನರಾದರು.
ವಿಜಯ್ ಸಿಂಧೂರ್ ಬಾಗಲಕೋಟೆ ಜಿಲ್ಲೆ ಜಮಖಂಡಿಯ ಸ್ವಗೃಹದಲ್ಲಿ ಶನಿವಾರ ಬೆಳಗ್ಗೆ ನಿಧನರಾದರು. ಅವರಿಗೆ ಕರ್ನಾಟಕ ಸರ್ಕಾರದ ವರ್ಣಶಿಲ್ಪಿ ವೆಂಕಟಪ್ಪ ಇಂದ್ರ ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಬಂದಿವೆ.
ವಿಜಯ ಸಿಂಧೂರ ಅವರು 1940ರ ಜೂನ್ 7ರಂದು ಬಿಜಾಪುರ ಜಿಲ್ಲೆಯ ಬನಹಟ್ಟಿಯಲ್ಲಿ ಜನಿಸಿದರು. ತಂದೆ ಗಂಗಪ್ಪ. ತಾಯಿ ಬಸಮ್ಮ. ಬಾಲ್ಯದಿಂದಲೇ ಅವರು ಚಿತ್ರಕಲೆಯಲ್ಲಿ ಬಹಳ ಆಸಕ್ತಿ ವಹಿಸಿದ್ದರು.
ವಿಜಯ ಸಿಂಧೂರ ಅವರಿಗೆ ಬಾಂಬೆ ಆರ್ಟ್ ಸೊಸೈಟಿ ಪ್ರಶಸ್ತಿ, ಆರ್ಟ್ ಸೊಸೈಟಿ ಆಫ್ ಇಂಡಿಯಾದ ಪಟೇಲ್ ಟ್ರೋಫಿ, ಕೇಂದ್ರ ಲಲಿತ ಕಲಾ ಅಕಾಡಮಿ ಪ್ರಶಸ್ತಿ, ಕೋಲ್ಕತ್ತಾದ ಅಖಿಲ ಭಾರತ ಕಲಾ ಪ್ರದರ್ಶನ ಪ್ರಶಸ್ತಿ, ರಾಜ್ಯ ಲಲಿತ ಕಲಾ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಲಭಿಸಿವೆ.