newsics.com
ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಿ, ಮುಖ್ಯಮಂತ್ರಿಯಾಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕೆಲವರು ಕಾಯುತ್ತಿದ್ದಾರೆಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ ಪೊಲೀಸರಿಗೆ ಕಾಂಗ್ರೆಸ್ ದೂರು ದಾಖಲಿಸಿದೆ.
1,000 ಕೋಟಿ ಹಣದ ಮೂಲ ಯಾವುದು? ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಪಿಎಂಎಲ್ಎ ಅಡಿ ಕೇಸ್ ಕೂಡ ಬರುತ್ತದೆ. ವಿಚಾರಣೆಗೊಳಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸೆ.29ರಂದು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಅವರು ಈ ಹೇಳಿಕೆ ನೀಡಿದ್ದರು.