newsics.com
ಬೆಂಗಳೂರು: ಕನ್ನಡತಿ ಧಾರಾವಾಹಿಯ ನಟಿ ಪ್ರೀತಿನಿರಾಕರಣೆ ಮಾಡಿದ್ದರಿಂದ ನೊಂದ ಯುವಕನೊಬ್ಬ ಸಾವಿಗೆ ಶರಣಾಗಿದ್ದಾನೆ.
ಯುವಕ ಆಕೆಯೊಂದಿಗೆ ಹಲವು ತಿಂಗಳಿಂದ ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದರು. ಆದರೆ, ನಿನ್ನೆ ರಾತ್ರಿ ಪಾರ್ಟಿ ಮಾಡಿ ಮದುವೆ ಪ್ರಸ್ತಾಪ ಮಾಡಿದಾಗ ನಟಿ ಮದುವೆ ನಿರಾಕರಣೆ ಮಾಡಿದ್ದಾಳೆ. ಇದರಿಂದ ಮನನೊಂದ ಯುವಕ ಮದನ್(25) ಪ್ರಾಣ ಬಿಟ್ಟಿದ್ದಾನೆ.

ಸಿರಿಯಲ್ ನಟಿ ಮೋಹಕ್ಕೆ ಯುವಕ ಜೀವ ತೊರೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೀರಿಯಲ್ ನಟಿ ವೀಣಾ ಮೋಹಕ್ಕೆ ಬಿದ್ದಿದ್ದ ಮದನ್ ಆಕೆಯನ್ನು ಪ್ರೀತಿ ಮಾಡುತ್ತಾ ಕೆಲವು ದಿನಗಳಿಂದ ಇಬ್ಬರೂ ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದರು. ಇಬ್ಬರೂ ನಿನ್ನೆ ರಾತ್ರಿ ಇಬ್ಬರು ಒಂದೇ ರೂಮಿನಲ್ಲಿ ಪಾರ್ಟಿ ಮಾಡಿದ್ದರು. ಪಾರ್ಟಿ ನಂತರ ಮದನ್ ವೀಣಾಗೆ ಮದುವೆ ಪ್ರಸ್ತಾಪ ಮಾಡಿದ್ದಾನೆ. ಈ ವೇಳೆ ನಟಿ ವೀಣಾ ನಾನು ನಿನ್ನನ್ನು ಮದುವೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾಳೆ.
ನಂತರ ಯುವತಿ ಅಲ್ಲಿಂದ ಹೋಗಿದ್ದಾಳೆ. ಇದರಿಂದ ಮನನೊಂದಿದ್ದ ಯುವಕ ಮದನ್ ತಡರಾತ್ರಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ.
ಮದನ್ ಈವೆಂಟ್ ಮ್ಯಾನೇಜ್ಮೆಂಟ್ನಲ್ಲಿ ಡೆಕೊರೇಟ್ ಕೆಲಸ ಮಾಡಿಕೊಂಡಿದ್ದ. ವೀಣಾಳನ್ನ ಕೆಲ ತಿಂಗಳ ಹಿಂದೆ ಪರಿಚಯ ಮಾಡಿಕೊಂಡಿದ್ದ ಮದನ್, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ಇಬ್ಬರು ಲೀವಿಂಗ್ ರಿಲೇಶನ್ ಹೊಂದಿದ್ದರು. ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕನ್ನಡತಿ ಸೀರಿಯಲ್ ನಟಿ ವೀಣಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೀಣಾ ಧಾರಾವಾಹಿ ಅಲ್ಲದೆ ಕೆಲವು ಜಾಹೀರಾತುಗಳಲ್ಲೂ ನಟಿಸಿದ್ದಾಳೆ.
ಇಸ್ರೇಲ್ ಮೇಲೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾಯಿಸಿದ ಇರಾನ್, ಯುದ್ಧ ಮತ್ತಷ್ಟು ತೀವ್ರ
ಲೈಂಗಿಕ ಸಂಪರ್ಕ ವೇಳೆ ಬ್ಲೀಡಿಂಗ್! ಪ್ರಿಯಕರನ ಕಾಲಹರಣದಿಂದ ಹೋಯಿತು ವಿದ್ಯಾರ್ಥಿನಿಯ ಪ್ರಾಣ