newsics.com
ಬೆಂಗಳೂರು : ಅಕ್ರಮ ಮರಳು ಸಾಗಾಟ ಮಾಡುವವರಿಗೆ ದಂಡ ಹಾಕಿದ ಬಗ್ಗೆ ಪ್ರಶ್ನಿಸಿದ ಶಾಸಕರಿಗೆ ತುಂಬಿದ ಸಭೆಯಲ್ಲಿ ಮಹಿಳಾ ಅಧಿಕಾರಿ ಖಡಕ್ ತಿರುಗೇಟು ನೀಡಿದ್ದಾರೆ.
ದಂಡ ಹಾಕಿದ ಅಧಿಕಾರಿಗೆ ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಕ್ಲಾಸ್ ತೆಗದುಕೊಂಡಿದ್ದಾರೆ. ಶಾಸಕರ ಮಾತಿಗೆ ತುಂಬಿದ ಸಭೆಯಲ್ಲಿ ಮಹಿಳಾ ಅಧಿಕಾರಿ ಡಿಡಿ ಆಶಾ ಖಡಕ್ ತಿರುಗೇಟು ಕೊಟ್ಟಿರುವಂತಹ ಘಟನೆ ಕಾರವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಿನ್ನೆ ನಡೆದ ಕೆಡಿಪಿ ಸಭೆಯಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಬೇರೆ ಎಲ್ಲೂ ಅಕ್ರಮ ಮರಳು ಸಾಗಾಟ ನಡೆಯುವುದೆ ಇಲ್ವಾ, ನನ್ನ ಕ್ಷೇತ್ರದಲ್ಲೇ ಹೆಚ್ಚು ಕೇಸ್ ದಾಖಲು ಮಾಡಿ ದಂಡ ವಿಧಿಸುವುದು ಯಾಕೆ ಎಂದು ಶಾಸಕ ಭೀಮಣ್ಣ ನಾಯ್ಕ್ ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದ್ದಾರೆ.
ಇದಕ್ಕೆ ಉತ್ತರಿಸಿದ ಡಿಡಿ ಆಶಾ, ಜಿಲ್ಲೆಯ ಮರಳುಗಾರಿಕೆ ಪ್ರಕರಣ ಸದ್ಯಕ್ಕೆ ಕೋರ್ಟ್ನಲ್ಲಿದೆ. ಇನ್ನೂ ಮಾರ್ನಾಲ್ಕು ತಿಂಗಳಲ್ಲಿ ಕೋರ್ಟ್ ಆದೇಶ ಬರಬಹುದು. ಜಿಲ್ಲೆಯಲ್ಲಿ ಮರಳುಗಾರಿಕೆ ಸದ್ಯಕ್ಕೆ ನಿಷೇಧ ಮಾಡಲಾಗಿದೆ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ಮರಳು ಸಾಗಾಟ ಕಂಡು ಬಂದರೆ ದಂಡ ವಿಧಿಸುವುದು ನಿಯಮ. ನಿಯಮದ ಪ್ರಕಾರ ದಂಡ ತೆಗೆದುಕೊಳ್ಳುವಂತೆ ನಮ್ಮ ಸಿಬ್ಬಂದಿಗೆ ಸೂಚಿಸಿದ್ದೇನೆ. ನಾನು ಒಬ್ಬಳೇ ಮಾಡುತ್ತಿಲ್ಲ. ಪೊಲೀಸ್ ಇಲಾಖೆ ಕೂಡ ಮಾಡುತ್ತಿದ್ದಾರೆ. ಅವರಿಗೂ ಬೇಕಾದರೆ ಕರೆದು ಕೇಳಿ ನಾನು ನಿಯಮದ ಪ್ರಕಾರ ಕೆಲಸ ಮಾಡುತ್ತಿದ್ದೇನೆ ಎಂದು ಖಡಕ್ ಆಗಿ ಹೇಳಿದ್ದಾರೆ.