newsics.com
ರಾಯಚೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಕೇಳಿಬರುತ್ತಿರುವ ಮಾತುಗಳೆಲ್ಲ ಕೇವಲ ಊಹಾಪೋಹಗಳಷ್ಟೆ. ಇದಕ್ಕೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ಸಿನ ನಾಯಕರು ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸುವುದು ಸಹಜವಾದ ಚಟುವಟಿಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನಗರದ ಕೃಷಿ ವಿವಿಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಕೇಳಿದರೆ ರಾಜಿನಾಮೆ ಕೊಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ನಾನು ತಪ್ಪು ಮಾಡಿಲ್ಲ. ನಾನು ರಾಜೀನಾಮೆ ನೀಡುವುದಿಲ್ಲ ಎಂದು ಪುನರುಚ್ಚರಿಸಿದರು.
ವಿರೋಧ ಪಕ್ಷದವರು ನನ್ನ ಮೇಲೆ ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇನೆ ಎಂದರು.
ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಹೇಳಿದರು.