newsics.com
ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಮುಂದಿನ 5 ದಿನ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಕೂಡ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದೆ.ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣದಲ್ಲಿದ್ದ ಬೆಂಗಳೂರು ಸಂಜೆಯಾಗುತ್ತಿದ್ದಂತೆ ಭಾರೀ ಮಳೆ ಸುರಿದಿದೆ. ಸತತ ಮಳೆಯಿಂದ ಬೆಂಗಳೂರಿನ ಹಲವು ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಶನಿವಾರದ ಕಾರಣ ದೂರದ ಊರಿಗೆ ತೆರಳುವ ಜನರು ಕೂಡ ಪರದಾಡುವಂತಾಯಿತು.
ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣದಲ್ಲಿದ್ದ ಬೆಂಗಳೂರು ಸಂಜೆಯಾಗುತ್ತಿದ್ದಂತೆ ಭಾರೀ ಮಳೆ ಸುರಿದಿದೆ. ಸತತ ಮಳೆಯಿಂದ ಬೆಂಗಳೂರಿನ ಹಲವು ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಶನಿವಾರದ ಕಾರಣ ದೂರದ ಊರಿಗೆ ತೆರಳುವ ಜನರು ಕೂಡ ಪರದಾಡುವಂತಾಯಿತು.
ಶನಿವಾರ ಕೂಡ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣದಲ್ಲಿದ್ದ ಬೆಂಗಳೂರು ಸಂಜೆಯಾಗುತ್ತಿದ್ದಂತೆ ಭಾರೀ ಮಳೆ ಸುರಿದಿದೆ. ಸತತ ಮಳೆಯಿಂದ ಬೆಂಗಳೂರಿನ ಹಲವು ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಶನಿವಾರದ ಕಾರಣ ದೂರದ ಊರಿಗೆ ತೆರಳುವ ಜನರು ಕೂಡ ಪರದಾಡುವಂತಾಯಿತು.
ಬೆಂಗಳೂರಿನ ಟೌನ್ ಹಾಲ್, ಕಾರ್ಪೋರೇಷನ್ ಸರ್ಕಲ್, ಕೆ.ಆರ್ ಮಾರ್ಕೆಟ್, ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಮಳೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆಯಿಂದಾಗಿ ಟ್ರಾಫಿಕ್ ಜಾಮ್ ಹೆಚ್ಚಾಗಿದೆ. ಅಕ್ಟೋಬರ್ 8ರ ವರೆಗೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಸಿದೆ. ಇಂದಿನಿಂದ ಅಕ್ಟೋಬರ್ 9ರ ವರೆಗೆ ಮಳೆ ವ್ಯಾಪಕವಾಗಿ ಸುರಿಯಲಿದೆ ಎಂದಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಂಗಳೂರು, ದಾವಣಗೆರೆ ಜಿಲ್ಲೆ, ಚಿಕ್ಕಮಂಗಳೂರು, ಹಾಸನ, ಚಿತ್ರದುರ್ಗ, ಬಳ್ಳಾರಿ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯನ್ನು ಹವಾಮಾನ ಇಲಾಖೆ ಸೂಚಿಸಿದೆ.
ಮೈಸೂರು ದಸರಾ ಉತ್ಸವ ಅದ್ಧೂರಿಯಾಗಿ ಆರಂಭಗೊಂಡು ಪ್ರತಿ ದಿನ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಆದರೆ ಇಂದು ಮೈಸೂರಿನಲ್ಲಿನ ಜಿಟಿಜಿಟಿ ಮಳೆ ದಸರಾ ಹಬ್ಬಕ್ಕೆ ಅಡ್ಡಿಯಾಯಿತು.