newsics.com
ಹುಬ್ಬಳ್ಳಿ: ದತ್ತಾತ್ರೇಯ ದೇವಸ್ಥಾನದಲ್ಲಿನ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹಬ್ಬದ ದಿನವೇ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಬೇಸರವನ್ನು ಮೂಡಿಸಿದೆ. ಏರಿಯಾದಲ್ಲಿ ನಡೆದ ಈ ಘಟನೆಯಿಂದ ಆತಂಕ ಕೂಡ ನಿರ್ಮಾಣವಾಗಿದೆ.
15 ವರ್ಷಗಳ ಹಿಂದೆ ಅಪರ್ಣಾ ಅಪಾರ್ಟ್ಮೆಂಟ್ನಲ್ಲಿನ ಎಲ್ಲರೂ ಸೇರಿ ದತ್ತಾತ್ರೇಯ ದೇವಸ್ಥಾನವನ್ನು ನಿರ್ಮಾಣ ಮಾಡಿ ದತ್ತಾತ್ರೇಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಪ್ರತಿದಿನವೂ ಕೂಡ ಪೂಜೆಯನ್ನು ಕೂಡ ನೆರವೇರಿಸಲಾಗುತ್ತಿತ್ತು. ನಿನ್ನೆ ರಾತ್ರಿ 2 ಗಂಟೆಯವರೆಗೂ ಇಲ್ಲಿ ಎಲ್ಲರೂ ಸೇರಿ ನವರಾತ್ರಿ ಹಬ್ಬವನ್ನು ಆಚರಣೆ ಮಾಡಿ ಹೋಗಿದ್ದಾರೆ. ಇಂದು ಬೆಳ್ಳಿಗ್ಗೆ ದೇವಸ್ಥಾನದ ಪೂಜಾರಿ ಬಂದಾಗ ದುಷ್ಕ್ರತ್ಯ ನಡೆದಿರುವುದು ಬೆಳಕಿಗೆ ಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹು-ಧಾ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಶಾಸಕ ಮಹೇಶ್ ಟೆಂಗಿನಕಾಯಿ ಕೂಡ ಭೇಟಿ ನೀಡಿ ಪರಿಶೀಲನೆ ಮಾಡಿ 24 ಗಂಟೆಯಲ್ಲಿ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಹೇಳಿದ್ದಾರೆ.