newsics.com
ದೆಹಲಿ: ಅಕ್ರಮ ವರ್ಗಾವಣೆ ಸಂಬಂಧ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಮತ್ತು ಪುತ್ರರಾದ ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಹೌದು, ರೈಲ್ವೆ ಇಲಾಖೆಯಲ್ಲಿನ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಸಂಬಂಧ ಜಾಮೀನು ನೀಡಲಾಗಿದೆ.
ತಲಾ 1 ಲಕ್ಷ ರೂ. ಮೊತ್ತದ ಬಾಂಡ್ ನೀಡುವಂತೆ ಸೂಚಿಸಿ ಜಾಮೀನು ನೀಡಿರುವ ನ್ಯಾಯಾಲಯ, ವಿಚಾರಣೆಯನ್ನು ಇದೇ ತಿಂಗಳ 25ಕ್ಕೆ ಮುಂದೂಡಿದೆ. ಈ ಹಿಂದೆ ನ್ಯಾಯಾಲಯವು ಅವರಿಗೆ ನೀಡಿದ್ದ ಸಮನ್ಸ್ಗೆ ಅನುಗುಣವಾಗಿ ಲಾಲೂ ಪ್ರಸಾದ್ ಮತ್ತು ಅವರ ಪುತ್ರರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆರೋಪಿಗಳ ವಿರುದ್ಧದ ಪೂರಕ ಆರೋಪ ಪಟ್ಟಿಯನ್ನು ಪರಿಗಣಿಸಿದ ಬಳಿಕ ನ್ಯಾಯಾಧೀಶರು ಸಮನ್ಸ್ ಜಾರಿ ಮಾಡಿದ್ದಾರೆ.
ಉದ್ಯೋಗಕ್ಕಾಗಿ ಭೂ ಹಗರಣದಲ್ಲಿ ಲಾಲು ಪ್ರಸಾದ್ ಯಾದವ್ , ತೇಜಸ್ವಿ ಯಾದವ್ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ರೈಲ್ವೇ ಒದಗಿಸಿದ ಉದ್ಯೋಗಗಳಿಗೆ ಬದಲಾಗಿ ಲಾಲು ಪ್ರಸಾದ್ ಯಾದವ್ ಅವರು ಹಲವಾರು ತುಂಡು ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಇಡಿ ತನಿಖೆ ಹೇಳಿತ್ತು.