newsics.com
ಬೆಂಗಳೂರು : ದರ್ಶನ್ ಪರ ವಕೀಲರು ಪ್ರಕರಣದ ತನಿಖೆ ಬಗ್ಗೆ ಎತ್ತಿದ್ದ ಪ್ರಶ್ನೆಗಳಿಗೆ ಇಂದು ಎಸ್ಪಿಪಿ ಪ್ರಸನ್ನ ಕುಮಾರ್ ಉತ್ತರಗಳನ್ನು ನೀಡಿದರು.
ದರ್ಶನ್ ಪರ ವಾದಿಸಿದ್ದ ಹಿರಿಯ ವಕೀಲ ಸಿವಿ ನಾಗೇಶ್ ಅವರು ತನಿಖೆಯಲ್ಲಿ ಹಲವು ಲೋಪದೋಷಗಳಿವೆ. ಪೊಲೀಸರೇ ಸಾಕ್ಷ್ಯಗಳನ್ನು ಸೃಷ್ಟಿ ಮಾಡಿ, ಕತೆ ಹೆಣೆದಿದ್ದಾರೆ ಎಂದು ಟೀಕಿಸಿದ್ದರು.
ಇದಕ್ಕೆ ಉತ್ತರಿಸಿದ ಪ್ರಸನ್ನ ಕುಮಾರ್ ಅವರು, ದರ್ಶನ್ ಅಂಡ್ ಗ್ಯಾಂಗ್ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದ ರೀತಿ ಹಾಗೂ ಪ್ರತ್ಯಕ್ಷದರ್ಶಿಗಳು ನೀಡಿರುವ ಹೇಳಿಕೆ ಎಲ್ಲವನ್ನೂ ಉಲ್ಲೇಖಿಸಿ ವಾದಿಸಿದ್ರು
ದರ್ಶನ್, ಪವಿತ್ರಾ ಹಾಗೂ ಇತರ ಆರೋಪಿಗಳು ನಾಲ್ಕು ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಅದಾಗಲೇ ನಾಲ್ಕು ಆರೋಪಿಗಳಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ನಾಳೆಗೆ ವಿಚಾರಣೆ ಮುಂದೂಡಲಾಗಿದೆಯಾದರೂ ನಾಳೆಯೂ ಸಹ ಜಾಮೀನು ಸಿಗುವುದು ಅನುಮಾನವೇ ಎನ್ನಲಾಗುತ್ತಿದೆ.