Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > Dasara Special | ಸೌಭಾಗ್ಯ ನೀಡುವ ಕಾತ್ಯಾಯಿನಿ: ನವರಾತ್ರಿ ಆರನೇ ದಿನ
ಅನಾವರಣಪ್ರಮುಖ

Dasara Special | ಸೌಭಾಗ್ಯ ನೀಡುವ ಕಾತ್ಯಾಯಿನಿ: ನವರಾತ್ರಿ ಆರನೇ ದಿನ

Share
2 Min Read
SHARE

newsics.com

08.10.2024

ಚಂದ್ರಹಾಸೋಜ್ಜ್ವಲಕರಾ ಶಾರ್ದೂಲವರವಾಹನಾ|
ಕಾತ್ಯಾಯನೀ ಶುಭಂ ದದ್ಯಾತ್
ದೇವೀ ದಾನವಘಾತಿನೀ||

ಜಗಜ್ಜನನಿಗೆ ಕಾತ್ಯಾಯಿನಿ ಎಂಬ ಹೆಸರು ಹೇಗೆ ಬಂತು ಎಂಬುದಕ್ಕೆ ಹಿನ್ನೆಲೆ ಇದೆ. ಕತ ಎಂಬ ಋಷಿ ಇದ್ದರು. ಅವರ ಮಗನ ಹೆಸರು ಕಾತ್ಯ. ಇದೇ ಕಾತ್ಯ ಋಷಿಯ ಗೋತ್ರದಲ್ಲಿ ಜನಿಸಿದವರು ಕಾತ್ಯಾಯನ. ಆ ಭಗವತಿಯು ತಮ್ಮ ಮನೆಯಲ್ಲಿ ಮಗಳಾಗಿ ಹುಟ್ಟಬೇಕು ಎಂಬ ಅಭೀಷ್ಟದಿಂದ ಅವರು ಕಠಿಣವಾದ ತಪಸ್ಸು ಮಾಡಿದರು. ಅವರ ಪ್ರಾರ್ಥನೆಯನ್ನು ಆ ದೇವಿ ನಡೆಸಿಕೊಟ್ಟಳು. ಕೆಲ ಸಮಯದ ನಂತರ ರಾಕ್ಷಸನಾದ ಮಹಿಷಾಸುರನ ಉಪಟಳವು ಈ ಭೂಮಿ ಮೇಲೆ ಹೆಚ್ಚಾಯಿತು. ಆಗ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಮಹೇಶ್ವರರು ಹಾಗೂ ಎಲ್ಲ ದೇವತೆಗಳು ಸೇರಿ, ತಂತಮ್ಮ ತೇಜಶ್ಶಕ್ತಿಯ ಅಂಶವನ್ನು ನೀಡಿ, ಒಬ್ಬ ದೇವಿಯನ್ನು ಸೃಷ್ಟಿ ಮಾಡಿದರು. ಆಕೆಯು ಮಹಿಷಾಸುರನ ಸಂಹಾರಕ್ಕಾಗಿಯೇ ಸೃಷ್ಟಿಯಾದವಳು. ಋಷಿಗಳಾದ ಕಾತ್ಯಾಯನರು ಈ ದೇವಿಯ ಪೂಜೆಯನ್ನು ಮೊದಲಿಗೆ ಮಾಡಿದರು. ಆ ಕಾರಣದಿಂದ ಆಕೆಗೆ ಕಾತ್ಯಾಯಿನಿ ಎಂಬ ಹೆಸರು ಬಂತು.

ಜತೆಗೆ ಕಾತ್ಯಾಯನರಿಗೆ ಈಕೆ ಮಗಳಾಗಿ ಹುಟ್ಟಿದಳು ಎಂಬ ಉಲ್ಲೇಖ ಸಹ ಇದೆ. ಆ ದೇವಿಯ ಅವತಾರ ಆಗಿದ್ದು ಭಾದ್ರಪದ ಮಾಸದ ಕೃಷ್ಣ ಪಕ್ಷದ ಚತುರ್ದಶಿ ದಿನದಂದು. ಆ ನಂತರ ಆಶ್ವಯುಜ ಮಾಸದ ಶುಕ್ಲ ಪಕ್ಷದ ಸಪ್ತಮಿ, ಅಷ್ಟಮಿ, ನವಮಿಯ ತನಕ ಮೂರು ದಿನ ಕಾತ್ಯಾಯನ ಋಷಿಗಳಿಂದ ಪೂಜೆಯನ್ನು ಸ್ವೀಕರಿಸಿದ ನಂತರದಲ್ಲಿ ದಶಮಿಯಂದು ದೇವಿಯು ಮಹಿಷಾಸುರನ ಸಂಹಾರ ಮಾಡಿದಳು.

ಅಂದ ಹಾಗೆ ಕೃಷ್ಣನನ್ನು ಪತಿಯಾಗಿ ಪಡೆಯುವ ಬಯಕೆಯಿಂದ ಗೋಪಿಕೆಯರು ಕಾಳಿಂದಿ- ಯಮುನಾ ನದಿಯ ದಡದಲ್ಲಿ ಕಾತ್ಯಾಯನಿಯ ಪೂಜೆ ಮಾಡಿದ್ದರಂತೆ. ಆ ಮಹಾಮಾತೆಯ ವಿವರಣೆ ಹೇಗಿದೆ ಅಂದರೆ, ಆಕೆ ಬಣ್ಣ ಬಂಗಾರದಂತೆ ಹೊಳೆಯುತ್ತದೆ. ನಾಲ್ಕು ಭುಜಗಳಿವೆ. ಬಲಗಡೆಯ ಮೇಲಿನ ಕೈ ಅಭಯ ಮುದ್ರೆಯನ್ನು ತೋರುತ್ತಿದೆ. ಕೆಳಗಿನ ಕೈ ವರ ಮುದ್ರೆಯನ್ನು ತೋರುತ್ತಿದೆ. ಎಡಗಡೆಯ ಮೇಲಿನ ಕೈಯಲ್ಲಿ ಖಡ್ಗವಿದ್ದು, ಕೆಳಗಿನ ಕೈಯಲ್ಲಿ ಕಮಲದ ಹೂವಿದೆ. ಇನ್ನು ಈ ತಾಯಿಯ ವಾಹನವು ಸಿಂಹವಾಗಿದೆ.

ಯಾರು ಕಾತ್ಯಾಯಿನಿ ದೇವಿಯನ್ನು ಶ್ರದ್ಧಾ- ಭಕ್ತಿಪೂರ್ವಕವಾಗಿ ಆರಾಧನೆ ಮಾಡುತ್ತಾರೋ ಅಂಥವರಿಗೆ ಧರ್ಮ-ಅರ್ಥ-ಕಾಮ್ಯ-ಮೋಕ್ಷ ಹೀಗೆ ಚತುರ್ವಿಧ ಫಲ ಪುರುಷಾರ್ಥಗಳು ಸಹ ದೊರೆಯುತ್ತವೆ. ರೋಗ, ಶೋಕ, ದುಃಖ, ದಾರಿದ್ರ್ಯಗಳು ದೂರವಾಗುತ್ತವೆ. ಅಷ್ಟೇ ಅಲ್ಲ, ಜನ್ಮಜನ್ಮಾಂತರದ ಪಾಪಗಳು ನಾಶವಾಗುತ್ತವೆ. ಇಹ ಲೋಕದಲ್ಲಿ ದೇವಿಯ ಆರಾಧಕರು ಅಲೌಕಿಕವಾದ ತೇಜಸ್ಸು, ಕಾಂತಿ, ಸಮಾಧಾನ-ಸಂತೃಪ್ತಿಯನ್ನು ಕಾಣುತ್ತಾರೆ.

ಕಾತ್ಯಾಯಿನಿ ದೇವಿಯನ್ನು
ಏತತ್ತೇ ವದನಂ ಸೌಮ್ಯಂ ಲೋಚನತ್ರಯಭೂಷಿತಮ್|
ಪಾತು ನಃ ಸರ್ವಭೂತೇಭ್ಯಃ ಕಾತ್ಯಾಯನಿ ನಮೋಸ್ತುತೇ||

ಹೀಗೆ ಸಹ ಆರಾಧಿಸಲಾಗುತ್ತದೆ. ಈ ದೇವಿಯ ಆರಾಧನೆಯಿಂದಾಗಿ ಭಯವು ದೂರವಾಗಿ ಧೈರ್ಯ ಸಂಚಯನ ಆಗುತ್ತದೆ, ಏನನ್ನಾದರೂ ಸಾಧಿಸುವ ಅಚಲ ವಿಶ್ವಾಸ ಸಹ ಮೂಡುತ್ತದೆ. ಆದ್ದರಿಂದ ದೇವಿಯನ್ನು ಕಾತ್ಯಾಯಿನಿ ರೂಪದಲ್ಲಿ ಆರಾಧನೆ ಮಾಡುವ ಮೂಲಕ ಸಕಲ ಸೌಭಾಗ್ಯವನ್ನೂ ಪಡೆಯಿರಿ.

Dasara Special | ಸ್ಕಂದಮಾತೆಯ ಕೃಪಾದೃಷ್ಟಿ: ನವರಾತ್ರಿ ಐದನೇ ದಿನ

Dasara Special | ಯಶಸ್ಸು ಕರುಣಿಸುವ ಕೂಷ್ಮಾಂಡಾ: ನವರಾತ್ರಿ ನಾಲ್ಕನೇ ದಿನ

ದುರ್ಗೆಯ ಸ್ವರೂಪ ಚಂದ್ರಘಂಟಾ: ನವರಾತ್ರಿ ಮೂರನೇ ದಿನ

Dasara Special | ದ್ವಿತೀಯಂ ಬ್ರಹ್ಮಚಾರಿಣಿ: ನವರಾತ್ರಿ ಎರಡನೇ ದಿನ

ನವರಾತ್ರಿ ಮೊದಲ ದಿನ: ಶೈಲಪುತ್ರಿ ಸ್ವರೂಪ ಆರಾಧನೆ

TAGGED:Dasara Special | Auspicious Goddess Katyayi: Sixth day of Navratri
Share This Article
Facebook Twitter Copy Link Print
Previous Article Dasara Special | ಸ್ಕಂದಮಾತೆಯ ಕೃಪಾದೃಷ್ಟಿ: ನವರಾತ್ರಿ ಐದನೇ ದಿನ
Next Article ಶುಭ ದಿನ… ಇಂದಿನ ಪಂಚಾಂಗ, ದಿನ ಭವಿಷ್ಯ, 08-10-2024, ಮಂಗಳವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?