Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹರಿಯಾಣದಲ್ಲೀಗ ಜಿಲೇಬಿ ರಾಜಕೀಯ: ವಿಜಯೋತ್ಸವಕ್ಕೆ 100 ಕೆಜಿ ಜಿಲೇಬಿ ಆರ್ಡರ್ ಮಾಡಿ ಕಾಂಗ್ರೆಸ್ ಅಣಕಿಸಿದ ಬಿಜೆಪಿ!
ದೇಶಪ್ರಮುಖವೈರಲ್

ಹರಿಯಾಣದಲ್ಲೀಗ ಜಿಲೇಬಿ ರಾಜಕೀಯ: ವಿಜಯೋತ್ಸವಕ್ಕೆ 100 ಕೆಜಿ ಜಿಲೇಬಿ ಆರ್ಡರ್ ಮಾಡಿ ಕಾಂಗ್ರೆಸ್ ಅಣಕಿಸಿದ ಬಿಜೆಪಿ!

Share
2 Min Read
SHARE

newsics.com

ಹರಿಯಾಣದಲ್ಲಿ ಗೆದ್ದು ಬೀಗುತ್ತಿರುವ ಬಿಜೆಪಿ ರಾಹುಲ್ ಗಾಂಧಿ ಅವರ ಜಿಲೇಬಿ ಹೇಳಿಕೆಯನ್ನು ತೀವ್ ಚರ್ಚೆಗೆ ಗ್ರಾಸ ಮಾಡಿದೆ. ಹೀಗಾಗಿ ಹರಿಯಾಣ ರಾಜಕೀಯದಲ್ಲಿ ಈಗ ಜಿಲೇಬಿ ಚರ್ಚೆ ತೀವ್ರಗೊಂಡಿದೆ.

ಅಷ್ಟೇ ಅಲ್ಲ, ಬಿಜೆಪಿ ವಿಜಯೋತ್ಸವದಲ್ಲಿ ನೂರು ಕೆಜಿ ಜಿಲೇಬಿಯನ್ನೇ ಹಂಚುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಣಕಿಸಿದೆ.

ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರ ವೇಳೆ ಗೊಹಾನದ ಪ್ರಸಿದ್ಧ ಮಾತುರಾಮ್ ಜಿಲೇಬಿಗಳನ್ನು ತಿಂದು ವೇದಿಕೆ ಮೇಲೆ ರಾಹುಲ್ ಗಾಂಧಿ, ಜಿಲೇಬಿ ಕಾರ್ಖಾನೆಗಳ ಸ್ಥಾಪನೆ, ಉದ್ಯೋಗಾವಕಾಶ ಕಲ್ಪಿಸಿ ದೇಶ ವಿದೇಶಗಳಿಗೆ ರಫ್ತು ಮಾಡುವ ಕುರಿತು ಮಾತನಾಡಿದ್ದರು.

ಬಿಜೆಪಿ ಇದನ್ನೇ ಚರ್ಚೆಯ ವಿಷಯವನ್ನಾಗಿ ಮಾಡಿಕೊಂಡು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದೆ. ರಾಹುಲ್ ಜಿಲೇಬಿ ಹೇಳಿಕೆಯನ್ನು ಪ್ರಧಾನಿ ಮೋದಿ ಕೂಡ ವ್ಯಂಗ್ಯವಾಡಿದ್ದರು. ಜಿಲೇಬಿ ಮೀಮ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿವೆ. ಜಿಲೇಬಿಯನ್ನು ಗದ್ದೆಯಲ್ಲಿ ಬೆಳೆಯಂತೆ ಬೆಳೆದು ತೋರಿಸಲಾಗುತ್ತಿದೆ. ಜಿಲೇಬಿಯ ಬೀಜಗಳು ಸಿದ್ಧವಾಗಿವೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿದ್ದಾರೆ. ಈಗ ಹೊಲಗಳಲ್ಲಿ ಜಿಲೇಬಿ ಬೆಳೆಯಲಾಗುವುದು ಎಂದು‌ ಕುಚೋದ್ಯ ಮಾಡುತ್ತಿದ್ದಾರೆ.

ಕಾಂಗ್ರೆಸ್ ನಾಯಕನನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಲಾಗುತ್ತಿದೆ. ನಂತರ ಕಾಂಗ್ರೆಸ್ ಕೂಡ ಜಲೇಬಿಯನ್ನು ಯಂತ್ರಗಳು ಮತ್ತು ಅದರ ಕಾರ್ಖಾನೆಯಿಂದ ತಯಾರಿಸಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಸೇಡು ತೀರಿಸಿಕೊಂಡಿತ್ತು. ಆದರೆ ಈಗ ಹರಿಯಾಣ ವಿಧಾನಸಭೆ ಫಲಿತಾಂಶ ಬೆನ್ನಲ್ಲೇ ಟ್ರೆಂಡ್‌ಗಳಲ್ಲಿ ಕಾಂಗ್ರೆಸ್‌ನ ಜಿಲೇಬಿಯ ರುಚಿ ಕಳೆಗುಂದಿದೆ.

ಎಕ್ಸಿಟ್ ಪೋಲ್‌ಗಳು ಮೊದಲು ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವ ಸ್ಥಿತಿಯಲ್ಲಿದೆ ಎಂದು ಹೇಳಿದ್ದವು. ಆದರೆ ಮಂಗಳವಾರ ಬೆಳಗ್ಗೆ ಮತ ಎಣಿಕೆ ಪ್ರಾರಂಭವಾಗುತ್ತಿದ್ದಂತೆ, ಪಕ್ಷವು ಉತ್ತಮ ಮುನ್ನಡೆ ಸಾಧಿಸಿತ್ತು. ಆದರೆ ಮತ ಎಣಿಕೆ ಮುಂದುವರಿದಂತೆ ಬಿಜೆಪಿ ತೀವ್ರ ಪೈಪೋಟಿ ನೀಡಿತ್ತು. ಅಲ್ಲದೆ ಸ್ಪಷ್ಟ ಬಹುಮತ ಸಾಧಿಸಿದ್ದು ರಾಹುಲ್ ಗಾಂಧಿಯ ಜಿಲೇಜಿ ಹೇಳಿಕೆ ಸಾಕಷ್ಟು ವೈರಲ್ ಆಗುತ್ತಿದೆ.

ಏನಿದು ಜಿಲೇಬಿ ಚರ್ಚೆ?:

ಹರಿಯಾಣದಲ್ಲಿ ಚುನಾವಣಾ ಪ್ರಚಾರ ವೇಳೆ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಗೊಹಾನದ ಪ್ರಸಿದ್ಧ ಜಿಲೇಬಿಯನ್ನು ತಿಂದು ಅದರ ರುಚಿಯನ್ನು ಪ್ರಶಂಸಿಸಿದ್ದರು. ಈ ವೇಳೆ ಅವರು ಹೇಳಿದ್ದು, ನಾನು ಕಾರಿನಲ್ಲಿ ಜಿಲೇಬಿ ಸವಿದು, ನನ್ನ ಜೀವನದ ಅತ್ಯುತ್ತಮ ಜಿಲೇಬಿ ತಿಂದಿದ್ದೇನೆ ಎಂದು ನನ್ನ ಸಹೋದರಿ ಪ್ರಿಯಾಂಕಾಗೆ ಸಂದೇಶ ಕಳುಹಿಸಿದ್ದೆ. ನಿನಗೂ ಒಂದು ಬಾಕ್ಸ್ ಜಿಲೇಬಿ ತರುತ್ತಿದ್ದೇನೆ. ದೀಪೇಂದ್ರ ಮತ್ತು ಬಜರಂಗ್ ಪುನಿಯಾ ಅವರಿಗೂ ಈ ಜಿಲೇಬಿ ಬಗ್ಗೆ ಭಾರತ ಸೇರಿದಂತೆ ಇಡೀ ಪ್ರಪಂಚಕ್ಕೆ ತಿಳಿಯಬೇಕು ಎಂದು ಹೇಳಿದೆ ಎಂದು ರಾಹುಲ್ ಹೇಳಿದ್ದರು.

https://x.com/rahul_agricos/status/1842038366810079568?t=NPBa_exWe654CTbYpMbIag&s=19

ಹರ್ಯಾಣ ಚುನಾವಣಾ ಕುಸ್ತಿಯಲ್ಲಿ ಗೆದ್ದ ವಿನೇಶ್‌ ಫೋಗಟ್‌

ಸಿಎಂ ಕಾನ್ವೆ ರೂಲ್ಸ್ ಬ್ರೇಕ್ – ಜನಾರ್ದನ ರೆಡ್ಡಿ ಕಾರು ಸೀಜ್!

TAGGED:Jlebi politics in Haryana: BJP mocked Congress by ordering 100 kg of Jlebi for Victory celebration!
Share This Article
Facebook Twitter Copy Link Print
Previous Article ಸಿಎಂ ಕಾನ್ವೆ ರೂಲ್ಸ್ ಬ್ರೇಕ್ – ಜನಾರ್ದನ ರೆಡ್ಡಿ ಕಾರು ಸೀಜ್!
Next Article ದರ್ಶನ್‌ಗೆ ಮತ್ತೆ ನಿರಾಸೆ – ವಿಚಾರಣೆ ನಾಳೆಗೆ ಮುಂದೂಡಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?