newsics.com
ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಸಚಿವ ಸತೀಶ್ ಜಾರಕಿಹೊಳಿ ಸಿಎಂ ತವರು ಜಿಲ್ಲೆಗೆ ಭೇಟಿ ನೀಡಿ, ಸ್ಥಳೀಯ ಶಾಸಕರು ಹಾಗೂ ಸಚಿವರೊಂದಿಗೆ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ನಿನ್ನೆ ಮೈಸೂರಿಗೆ ಭೇಟಿ ನೀಡಿದ್ದ ಸತೀಶ್ ಜಾರಕಿಹೊಳಿ ಸ್ಥಳೀಯ ಶಾಸಕರೊಂದಿಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಚಾಮರಾಜನಗರ ಸಂಸದ ಸುನೀಲ್ ಬೋಸ್ ಮನೆಯಲ್ಲಿ ʻಅಹಿಂದʼ ನಾಯಕರ ಡಿನ್ನರ್ ಮೀಟಿಂಗ್ನಲ್ಲೂ ಭಾಗಿಯಾಗಿದ್ದಾರೆ.
ಡಿನ್ನರ್ ಸಭೆಯಲ್ಲಿ ಸಚಿವತ್ರಯರಾದ ಡಾ.ಹೆಚ್.ಸಿ ಮಹದೇವಪ್ಪ, ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದಾರೆ. ಮೂವರು ಹಿರಿಯ ಸಚಿವರು ಡಿನ್ನರ್ ನೆಪದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ ಎನ್ನಲಾಗಿದೆ.