newsics.com
ರೇಣುಕಾಸ್ವಾಮಿ ಕೊಲೆ ಆರೋಪವನ್ನು ಎದುರಿಸುತ್ತಿರುವ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದಾಗ ತಕ್ಕಮಟ್ಟಿಗೆ ಆರೋಗ್ಯವಾಗಿಯೇ ಇದ್ದರು. ಆದರೆ ಬಳ್ಳಾರಿಗೆ ಶಿಫ್ಟ್ ಆದ ನಂತರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.
ಹೌದು, ಬಳ್ಳಾರಿ ಜೈಲಿನಲ್ಲಿ ದಾಸ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಇನ್ನು ದರ್ಶನ್ ಬೆನ್ನುನೋವು ಪರೀಕ್ಷೆ ನಡೆಸಿದ ವೈದ್ಯಾಧಿಕಾರಿಗಳು ದಾಖಲಿಸಿದ ವರದಿಯಲ್ಲಿ ಹಲವು ಮಾಹಿತಿ ಉಲ್ಲೇಖಿಸಲಾಗಿದೆ. ಬಿಮ್ಸ್ ಆರ್ಥೋ ವಿಭಾಗದ ಮುಖ್ಯಸ್ಥ ಡಾ ವೇಂಕಟೇಶಲು ನೇತೃತ್ವದಲ್ಲಿ ದರ್ಶನ್ ತಪಾಸಣೆ ಮಾಡಲಾಗಿದೆ. ಇನ್ನು ಬಿಮ್ಸ್ ವೈದ್ಯರು ನೀಡಿದ ವರದಿಯಲ್ಲಿನ ಅಂಶಗಳು ದರ್ಶನ್ ಗೆ ತೀವ್ರ ಬೆನ್ನುನೋವು ಇರೋದು ಖಾತ್ರಿ ಪಡಿಸಿವೆ ಎಂದು ಹೇಳಲಾಗುತ್ತಿದೆ.
ಕಳೆದ 9 ವರ್ಷಗಳಿಂದಲೂ ಬೆನ್ನುನೋವು ಸಂಬಂಧ ನಟ ದರ್ಶನ್ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯ ವೈದ್ಯರು ಭವಿಷ್ಯದಲ್ಲಿ ಸರ್ಜರಿ ಅವಶ್ಯಕತೆ ಬಗ್ಗೆ ಪ್ರಸ್ತಾಪ ಮಾಡಿದ್ದರು ಎಂದು ಹೇಳಲಾಗಿದೆ.