newsics.com
ಮುಂಬೈ: ದೇಶದ ಖ್ಯಾತ, ಶ್ರೇಷ್ಠ ಉದ್ಯಮಿ, ಪದ್ಮವಿಭೂಷಣ ಪುರಸ್ಕೃತ ಟಾಟಾ ಸನ್ಸ್ನ ಅಧ್ಯಕ್ಷ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ಬುಧವಾರ ರಾತ್ರಿ ನಿಧನರಾದರು.
ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.
ಎರಡು ದಿನಗಳ ಹಿಂದೆ ಅವರು ಅನಾರೋಗ್ಯದ ಕಾರಣಕ್ಕಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರೂ, ಬಳಿಕ ಈ ಬಗ್ಗೆ ಸ್ವತಃ ಅವರೇ ಸ್ಪಷ್ಟೀಕರಣ ನೀಡಿದ್ದರು. ಆದರೆ, ಬುಧವಾರ ಮತ್ತೊಮ್ಮೆ ಗಂಭೀರ ಸ್ಥಿತಿಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು.
ಈ ಬಗ್ಗೆ ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದಾರೆ.
1991ರಲ್ಲಿ ಟಾಟಾ ಸನ್ಸ್ನ ಚೇರ್ಮನ್ ಆಗಿದ್ದ ರತನ್ ಟಾಟಾ, 2012ರವರೆಗೂ ಈ ಹುದ್ದೆಯಲ್ಲಿದ್ದರು. ತಮ್ಮ ಮರಿ ಮುತ್ತಜ್ಜ ಸ್ಥಾಪನೆ ಮಾಡಿದ್ದ ಗ್ರೂಪ್ ಅನ್ನು ದೊಡ್ಡ ಮಟ್ಟದಲ್ಲಿ ಯಶಸ್ಸಿನ ಪಥದಲ್ಲಿ ಸಾಗಿಸಿದ್ದರು.
1996ರಲ್ಲಿ ಟಾಟಾ ಟೆಲಿಸರ್ವೀಸಸ್ ಕಂಪನಿ ಸ್ಥಾಪನೆ ಮಾಡಿದ್ದರೆ, 2004ರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ಕಂಪನಿಯನ್ನು ಸಾರ್ವಜನಿಕ ಪಾಲುದಾರ ಕಂಪನಿಯನ್ನಾಗಿ ಮಾಡಿದ್ದರು.
ರತನ್ ಟಾಟಾ ಜನಿಸಿದ್ದು 1937ರ ಡಿಸೆಂಬರ್ 28 ರಂದು. ಅವರು 1991 ರಿಂದ 2012 ರವರೆಗೆ ಟಾಟಾ ಗ್ರೂಪ್ನ ಅಧ್ಯಕ್ಷರಾಗಿದ್ದರು ಮತ್ತು ಈ ಸಮಯದಲ್ಲಿ ಅವರು ವ್ಯಾಪಾರ ವಲಯದಲ್ಲಿ ಅನೇಕ ದಾಖಲೆಗಳನ್ನು ಸ್ಥಾಪಿಸಿದರು ಮತ್ತು ದೇಶದ ಅತ್ಯಂತ ಹಳೆಯ ವ್ಯಾಪಾರ ಸಂಸ್ಥೆಗಳಲ್ಲಿ ಒಂದಾದ ಟಾಟಾ ಗ್ರೂಪ್ ಅನ್ನು ಮಹಾ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಪಾತ್ರವೇ ಹಿರಿದಾಗಿತ್ತು.ರತನ್ ಟಾಟಾ ಅವರ ವ್ಯಕ್ತಿತ್ವವನ್ನು ಗಮನಿಸಿದರೆ, ಅವರು ಕೇವಲ ಉದ್ಯಮಿಯಾಗದೆ ಸರಳ, ಉದಾತ್ತ ಮತ್ತು ಉದಾರ ವ್ಯಕ್ತಿಯಾಗಿದ್ದರು. ಅವರು ದೇಶಕ್ಕೆ ಸದಾ ಆದರ್ಶ ಮತ್ತು ಸ್ಪೂರ್ತಿ. ಅವರು ತಮ್ಮ ಗುಂಪಿನ ಚಿಕ್ಕ ನೌಕರನನ್ನೂ ತಮ್ಮ ಕುಟುಂಬವೆಂದು ಪರಿಗಣಿಸಿದ್ದರು.
ದೇಶಕ್ಕಾಗಿ ಅನೇಕ ಮಹತ್ತರವಾದ ಕೆಲಸಗಳನ್ನು ಮಾಡಿದ ಶ್ರೇಷ್ಠ ಮಾನವತಾವಾದಿ. ಟಾಟಾ ಗ್ರೂಪ್ ಅನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ರತನ್ ಟಾಟಾ ಪ್ರಮುಖ ಪಾತ್ರ ವಹಿಸಿದ್ದಾರೆ. ದೇಶಕ್ಕಾಗಿ ಮತ್ತು ಜನಸಾಮಾನ್ಯರಿಗಾಗಿ ಅವರು ಇಂತಹ ಅನೇಕ ಕೆಲಸಗಳನ್ನು ಮಾಡಿದರು, ಅದಕ್ಕಾಗಿ ಅವರು ಯಾವಾಗಲೂ ಸ್ಮರಣೀಯರಾಗಿದ್ದಾರೆ. ರತನ್ ಟಾಟಾ ಅವರು ಉದಾರ ವ್ಯಕ್ತಿ ಮಾತ್ರವಲ್ಲ ಕಷ್ಟದ ಸಮಯದಲ್ಲಿ ದೇಶಕ್ಕೆ ಸಹಾಯ ಮಾಡಲು ಯಾವಾಗಲೂ ಸಿದ್ಧವಿದ್ದ ಅಪ್ಪಟ ದೇಶಪ್ರೇಮಿ.
https://x.com/PTI_News/status/1844079357175742945
https://x.com/ANI/status/1844083328166834304?t=pgcppXMNdpChjBzH5wRjvA&s=19
ನಾನು ಕೊಲ್ಲದಿದ್ದಿದ್ದರೆ ಆಕೆಯೇ ನನ್ನನ್ನು ಕೊಲ್ಲುತ್ತಿದ್ದಳು: ಮಹಾಲಕ್ಷ್ಮಿ ಕೊಲೆ ರಹಸ್ಯ ಬಯಲು