newsics.com
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದೆ.
ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಒಂದು ತಿಂಗಳ ಬಳಿಕ ಮುನಿರತ್ನಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ.
ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿದ್ದ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.