newsics.com
ಬೆಂಗಳೂರು: ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಇದೇ ವೇಳೆ, ದಕ್ಷಿಣ ಭಾರತದ ಪುರುಷರಲ್ಲಿ ಫಲವತ್ತತೆ ದರ ನಿರೀಕ್ಷೆಗೂ ಮೀರಿ ಕುಸಿಯುತ್ತಿದೆ.
ಇದೇ ಕಾರಣಕ್ಕೆ ದಕ್ಷಿಣ ಭಾರತದ ಜನರು ಹೆಚ್ಚು ಮಕ್ಕಳನ್ನು ಹೊಂದಬೇಕೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮನವಿ ಮಾಡಿದ್ದಾರೆ.
ಆಂಧ್ರಪ್ರದೇಶದ ಹಲವು ಗ್ರಾಮಗಳಲ್ಲಿ ಮತ್ತು ದೇಶಾದ್ಯಂತ ಕೇವಲ ವೃದ್ಧರು ಮಾತ್ರ ಉಳಿದಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ. ಯುವಕರು ಬೇರೆ ನಗರಗಳಿಗೆ ತೆರಳಿದ್ದಾರೆ. ಇನ್ನೂ ಕೆಲವರು ದೇಶವನ್ನೇ ಬಿಟ್ಟು ದೂರ ಉಳಿದಿದ್ದಾರೆ.
ದಕ್ಷಿಣದ ರಾಜ್ಯಗಳಲ್ಲಿ ಫಲವತ್ತತೆ ದರವು ಈಗಾಗಲೇ 1.6 ಕ್ಕೆ ಕುಸಿದಿದೆ. ಇದು ರಾಷ್ಟ್ರೀಯ ಸರಾಸರಿ 2.1 ಕ್ಕಿಂತ ಕಡಿಮೆಯಾಗಿದೆ. ಫಲವತ್ತತೆ ದರವು ಇಳಿಮುಖವಾಗುತ್ತಿದ್ದರೆ, 2047 ರ ವೇಳೆಗೆ ವೃದ್ಧರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದ್ದು, ಮಕ್ಕಳ ಸಂಖ್ಯೆ ಇಳಿಮುಖವಾಗಲಿದೆ.
ಜಪಾನ್, ಚೀನಾ ಮತ್ತು ಅನೇಕ ಯುರೋಪಿಯನ್ ರಾಷ್ಟ್ರಗಳೂ ಇದೇ ಸಮಸ್ಯೆ ಎದುರಿಸುತ್ತಿದ್ದು, ಅಲ್ಲಿನ ನಾಗರಿಕರಿಗೆ ಹೆಚ್ಚು ಮಕ್ಕಳನ್ನು ಹೆರುವಂತೆ ಸಲಹೆ ನೀಡಲಾಗುತ್ತಿದೆ.
ಆಂಧ್ರಪ್ರದೇಶದಲ್ಲಿ ಜನಸಂಖ್ಯೆ ಬೆಳವಣಿಗೆ ದರ ಶೇ.1.6ಕ್ಕೆ ಕುಸಿದಿದೆ ಎಂದು ಮಾಹಿತಿ ನೀಡಿದರು. ಅಲ್ಲದೆ, ಭಾರತದ ಸರಾಸರಿ ಬೆಳವಣಿಗೆ ದರವು 1950 ರ ದಶಕದಲ್ಲಿ 6.2% ರಿಂದ 2021 ರಲ್ಲಿ 2.1% ಕ್ಕೆ ಇಳಿದಿದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ
ಆಂಧ್ರಪ್ರದೇಶ: 1.70, ಕರ್ನಾಟಕ: 1.70, ಕೇರಳ: 1.80, ತಮಿಳುನಾಡು: 1.80, ತೆಲಂಗಾಣ: 1.82
ಭಾರತದ TFR 1950 ರಲ್ಲಿ ಪ್ರತಿ ಮಹಿಳೆಗೆ 6.18 ಮಕ್ಕಳಿಂದ 2021 ರಲ್ಲಿ 1.91 ಕ್ಕೆ ಗಮನಾರ್ಹವಾಗಿ ಕಡಿಮೆಯಾಗಿದೆ. 2050 ರ ವೇಳೆಗೆ 1.29 ಕ್ಕೆ ಮತ್ತು 2100 ರ ವೇಳೆಗೆ 1.04 ಕ್ಕೆ ಇಳಿಯುವ ನಿರೀಕ್ಷೆಯಿದೆ. ಇದು ಮಕ್ಕಳ ಸಂಖ್ಯೆ ಕುಸಿತಕ್ಕೆ ಕಾರಣವಾಗಲಿದೆ.
ಮಹಿಳೆಯರಲ್ಲಿ ಹೆಚ್ಚಿದ ಶಿಕ್ಷಣ ಮತ್ತು ಉದ್ಯೋಗಿಗಳ ಭಾಗವಹಿಸುವಿಕೆ ಮದುವೆ ಮತ್ತು ಮಗುವನ್ನು ಹೆರುವಲ್ಲಿ ವಿಳಂಬವಲ್ಲದೆ, ಗರ್ಭನಿರೋಧಕಗಳ ಬಳಕೆ ಹೆಚ್ಚುತ್ತಿದೆ.
ಹೆಚ್ಚು ಮಕ್ಕಳಿರುವವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ಕಾನೂನನ್ನು ಈ ಹಿಂದೆಯೇ ಮಾಡಿದ್ದೆವು ಎಂದು ಚಂದ್ರಬಾಬು ನಾಯ್ಡು ಹೇಳಿದರು. ಆದರೆ ಈಗ ನಾವು ಆ ಕಾನೂನನ್ನು ರದ್ದುಪಡಿಸುತ್ತಿದ್ದೇವೆ. ಹೆಚ್ಚು ಮಕ್ಕಳಿರುವ ಕುಟುಂಬಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆ: ಎಂಎಲ್ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ
ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆ; ಶಸ್ತ್ರಾಸ್ತ್ರ ಹೊಂದಿದ್ದ ಉಗ್ರನ ಹತ್ಯೆ
ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆ; ಶಸ್ತ್ರಾಸ್ತ್ರ ಹೊಂದಿದ್ದ ಉಗ್ರನ ಹತ್ಯೆ
ಅಜ್ಜಿಯನ್ನು ಕೊಂದು ಆಕೆಯ ರಕ್ತವನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಿ ತ್ರಿಶೂಲದಿಂದ ಇರಿದುಕೊಂಡ ಮೊಮ್ಮಗ!