newsics.com
ಬೆಂಗಳೂರು : ಬಳ್ಳಾರಿ ಜೈಲಿನಿಂದ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗಿದೆ.
ಆಂಬ್ಯುಲೆನ್ಸ್ ಜೈಲಿಗೆ ಬಂದಿದ್ದು, ಅದರಲ್ಲಿ ದರ್ಶನ್ ತೆರಳಿದ್ದಾರೆ. ಸ್ಕ್ಯಾನಿಂಗ್ ಮಾಡಿಸಲು ವಿಮ್ಸ್ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಲಾಗಿದೆ.
ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಜಾಸ್ತಿ ಆಗಿರುವುದರಿಂದ ವೈದ್ಯರು ಜೈಲಿಗೆ ಬಂದು ಆರೋಗ್ಯ ತಪಾಸಣೆ ಮಾಡಿದ್ದಾರೆ. ಬಳಿಕ ಅವರಿಗೆ ಎಂಆರ್ಐ ಸ್ಕ್ಯಾನಿಂಗ್ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ. ಆ ಕಾರಣಕ್ಕಾಗಿ ಹೆಲ್ತ್ ಚೆಕಪ್ ಮಾಡಲು ವಿಮ್ಸ್ಗೆ ಅವರನ್ನು ಶಿಫ್ಟ್ ಮಾಡಲಾಗಿದೆ
.