newsics.com
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿ.ಪಿ. ಯೋಗೇಶ್ವರ್ ಇಂದು ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಈ ಮೂಲಕ, ಸೈನಿಕ ಬಿಜೆಪಿ ಬಿಟ್ಟು ‘ಕೈ’ ಹಿಡಿಯುವುದು ಖಚಿತವಾಗಿದೆ.
ಚನ್ನಪಟ್ಟಣ ಕ್ಷೇತ್ರದಿಂದ ಯೋಗೇಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.
ಶಿವಕುಮಾರ್ ಅವರು ತಮ್ಮ ಕಾರಿನಲ್ಲಿ ಯೋಗೇಶ್ವರ್ ಅವರನ್ನು ಕರೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದಾರೆ. ಆ ಬಳಿಕ ಯೋಗೇಶ್ವರ್ ಅವರ ಕಾಂಗ್ರೆಸ್ ಸೇರ್ಪಡೆ ಘೋಷಣೆಯಾಗುವ ಸಾಧ್ಯತೆಯಿದೆ.