newsics.com
ಮೈಸೂರು: ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಹಾಗೂ ಅವರ ಪುತ್ರಿ ಪ್ರಿಯಾಂಕಾ ವಾದ್ರಾ ಅವರು ಮಂಗಳವಾರ ಮೈಸೂರಿಗೆ ಭೇಟಿ ನೀಡಿದ್ದು, ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಿ ಬುಧವಾರ ಬೆಳಗ್ಗೆ ವಯನಾಡಿಗೆ ತೆರಳಲಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತಿತರರು ಸ್ವಾಗತಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲಿದ್ದಾರೆ. ಬುಧವಾರ (ಅ.23) ನಾಮಪತ್ರ ಸಲ್ಲಿಸಲಿದ್ದಾರೆ.
ವಯನಾಡಿಗೆ ತೆರಳಲೆಂದು ಮೈಸೂರಿಗೆ ಬಂದ ಸೋನಿಯಾಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ಕೆಲಕಾಲ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತಿತರರೊಂದಿಗೆ ಸಮಾಲೋಚನೆ ನಡೆಸಿದರು.
ಹೆಲಿಕಾಪ್ಟರ್ನಲ್ಲಿ ಬುಧವಾರ ವಯನಾಡಿಗೆ ತೆರಳಲಿರುವ ಸೋನಿಯಾಗಾಂಧಿ ಅವರು ಪಕ್ಷದ ಅಭ್ಯರ್ಥಿಯಾಗಿ ಪುತ್ರಿ ಪ್ರಿಯಾಂಕಾ ವಾದ್ರಾ ನಾಮಪತ್ರ ಸಲ್ಲಿಸಿದ ಬಳಿಕ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಸೋನಿಯಾ ಅವರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಾಥ್ ನೀಡಲಿದ್ದಾರೆ.
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್ ಮೂಲಕ ದರ್ಶನ್ ಶಿಫ್ಟ್