newsics.com
ನವದೆಹಲಿ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕೇರಳದ ವಯನಾಡು ಲೋಕಸಭೆ ಉಪ ಚುನಾವಣೆಗೆ ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ದೆಹಲಿಯಿಂದ ಮೈಸೂರಿಗೆ ಆಗಮಿಸಿದ್ದ ಪ್ರಿಯಾಂಕಾ ಗಾಂಧಿ ಇಂದು ಬೆಳಗ್ಗೆ ವಯನಾಡು ತಲುಪಿದ್ದರು. ವಯನಾಡಲ್ಲಿ ಕಾಂಗ್ರೆಸ್ ನಾಯಕರು ಅದ್ಧೂರಿ ಸ್ವಾಗತ ಕೋರಿದ್ದು, ಬಳಿಕ ಭರ್ಜರಿ ರೋಡ್ ಶೋ ಮೂಲಕ ಪ್ರಿಯಾಂಕ ಗಾಂಧಿ ಮಿಂಚು ಹರಿಸಿದರು. ರೋಡ್ ಶೋ ವೇಳೆ ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ಭಾಗಿಯಾಗಿದ್ರು.
ಪ್ರಿಯಾಂಕ ಗಾಂಧಿ ವಯನಾಡಿನ ಕಲ್ಪೆಟ್ಟಾ ಪುರಸಭೆಯ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಥ್ ನೀಡಿದರು.