newsics.com
ಬಿಗ್ ಬಾಸ್ ಕನ್ನಡ ಸೀಸನ್ 11 ಭಾರೀ ಕುತೂಹಲದಿಂದ ಸಾಗುತ್ತಿದೆ. ಸದ್ಯ ಮನೆಯಲ್ಲಿ ರಾಜಕೀಯ ಟಾಸ್ಕ್ ನಡೆಯುತ್ತಿದೆ. ಈ ಮಧ್ಯೆ ಬಿಗ್ ಬಾಸ್ ಟಾಸ್ಕ್ ನಲ್ಲಿ ಕೊಂಚ ಟ್ವಿಸ್ಟ್ ಕೊಟ್ಟಿದ್ದಾರೆ. ಅದೇನೆಂದರೆ ಬಿಗ್ ಬಾಸ್ ಮನೆಗೆ ಜನಸಾಮಾನ್ಯರನ್ನು ಕರೆಸಲಾಗಿದೆ.
ಬಿಗ್ ಬಾಸ್’ ಮನೆ ಪ್ರವೇಶ ಮಾಡಲು ಜನಸಾಮಾನ್ಯರಿಗೆ ಅವಕಾಶ ಇಲ್ಲ. ಆದರೆ, ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹೀಗೊಂದು ಅವಕಾಶ ನೀಡಲಾಗಿದೆ. ಸ್ಪರ್ಧಿಗಳು ಮನೆ ಒಳಗೆ ಪ್ರವೇಶ ಮಾಡಿ ಬಿಗ್ ಬಾಸ್ನ ಸ್ಪರ್ಧಿಗಳಿಗೆ ನಾನಾ ರೀತಿಯ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ.
ಹೌದು. ರಾಜಕೀಯ ಎಂದ ಮೇಲೆ ಜನರು ಇರಲೇಬೇಕು. ಜನರಿಂದಲೇ ಪ್ರತಿನಿಧಿಯೊಬ್ಬ ರಾಜಕಾರಣಿಯಾಗಿ ಆಯ್ಕೆಯಾಗುತ್ತಾನೆ. ಆದರೀಗ ಜನರನ್ನೇ ಮನೆಯೊಳಕ್ಕೆ ಕರೆಸಿಕೊಂಡಿರುವ ಬಿಗ್ ಬಾಸ್ ಸ್ಪರ್ಧಿಗಳಿಗೆ ದೊಡ್ಡ ಟಾಸ್ಕ್ ನೀಡಿದ್ದಾರೆ. ಆ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಮನೆಯೊಳಕ್ಕೆ ಕಾಲಿಟ್ಟ ಜನರ ಮನಗೆಲ್ಲುವುದೇ ರಾಜಕಾರಣಿಗಳ ಪ್ರಮುಖ ಗುರಿಯಾಗಿದೆ.