newsics.com
ಮುಂಬೈ: ಬಾಂದ್ರಾ ರೈಲು ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಿದ್ದರಿಂದ ಉಂಟಾದ ಕಾಲ್ತುಳಿತದಲ್ಲಿ 9 ಮಂದಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ನಿಲ್ದಾಣದ ಪ್ಲಾಟ್ಫಾರ್ಮ್ವೊಂದರಲ್ಲಿ ಜನರ ನೂಕುನುಗ್ಗಲಿನಿಂದಾಗಿ ಕಾಲ್ತುಳಿತದ ಈ ದುರ್ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಂದ್ರಾ ಟರ್ಮಿನಸ್ನ ಒಂದನೇ ಪ್ಲಾಟ್ಫಾರ್ಮ್ನಲ್ಲಿ ಭಾನುವಾರ ಬೆಳಗ್ಗೆ 5:56ಕ್ಕೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಮುಂಬೈ ಮಹಾನಗರ ಪಾಲಿಕೆ ನೀಡಿರುವ ಮಾಹಿತಿ ಪ್ರಕಾರ, ಬಾಂದ್ರಾ ಟರ್ಮಿನಸ್ನ ಪ್ಲಾಟ್ಫಾರ್ಮ್ 1ರಲ್ಲಿ ಬಾಂದ್ರಾ ಗೋರಖ್ಪುರ್ ಎಕ್ಸ್ಪ್ರೆಸ್ ರೈಲಿಗಾಗಿ ದೊಡ್ಡ ಸಂಖ್ಯೆಯಲ್ಲಿ ಜನರು ಕಾಯುತ್ತಿದ್ದರು. ದೀಪಾವಳಿ ಹಿನ್ನೆಲೆಯಲ್ಲಿ ತಂತಮ್ಮ ಊರುಗಳಿಗೆ ಹೋಗಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ರೈಲ್ವೆ ಸ್ಟೇಷನ್ನಲ್ಲಿ ಇದ್ದರು. ಟ್ರೈನ್ ಹತ್ತುವಾಗ ನೂಕುನುಗ್ಗುಲು ತೀವ್ರಗೊಂಡು ಕಾಲ್ತುಳಿತವಾಗಿದೆ.
ಗಾಯಾಳುಗಳನ್ನು ಶಬೀರ್ ಅಬ್ದುಲ್ ರೆಹಮಾನ್ (40), ಪರಮೇಶ್ವರ್ ಸುಖದರ್ ಗುಪ್ತಾ (28), ರವೀಂದ್ರ ಹರಿಹರ್ ಚುಮಾ (30), ರಾಮಸೇವಕ್ ರವೀಂದ್ರ ಪ್ರಸಾದ್ ಪ್ರಜಾಪತಿ (29), ಸಂಜಯ್ ತಿಲಕ್ರಾಮ್ ಕಂಗಯ್ (27), ದಿವ್ಯಾಂಶು ಯೋಗೇಂದ್ರ ಯಾದವ್ (18), ಮೊಹಮ್ಮದ್ ಶರೀಫ್ ಶೇಖ್ (25), ಇಂದ್ರಜಿತ್ ಸಹಾನಿ (19), ಮತ್ತು ನೂರ್ ಮೊಹಮ್ಮದ್ ಶೇಖರ್ (18) ಎಂದು ಗುರುತಿಸಲಾಗಿದೆ.
https://x.com/ANI/status/1850389620636459194?t=Gj9VAcTLDZsas1Grib1Shw&s=19