newsics.com
ಬೆಂಗಳೂರು: ರಾಜ್ಯಾದ್ಯಂತ 230 ಗೋಲ್ಗಪ್ಪಾ ತಯಾರಿಕಾ ಘಟಕ ಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ರಾಜ್ಯದಲ್ಲಿ ಗೋಲ್ ಗಪ್ಪಾಘಟಕಗಳಲ್ಲಿ ನೈರ್ಮಲ್ಯ ಕಾಪಾಡಲಾಗುತ್ತಿದೆಯೇ ಮತ್ತು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ವಸ್ತುಗಳನ್ನು ಬಳಸಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿ ಗಳು ರಾಜ್ಯಾದ್ಯಂತ 230 ಗೋಲ್ಗಪ್ಪಾ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ.
ಈ ವೇಳೆ 12 ಘಟಕಗಳು ನೈರ್ಮಲ್ಯ ಕಾಪಾಡದೆ ಗೋಲ್ಗಪ್ಪಾ ತಯಾರಿಸುತ್ತಿದ್ದದ್ದು ಕಂಡು ಬಂದಿದ್ದು, ಆ ಘಟಕಗಳ ಮಾಲೀಕರಿಂದ 13000 ರು. ದಂಡ ವಸೂಲಿ ಮಾಡಿ ಕ್ರಮ ಕೈಗೊಂಡಿದ್ದಾರೆ. ಉಳಿದಂತೆ 165 ಘಟಕಗಳಲ್ಲಿ ಗೋಲ್ಗಪ್ಪಾ ಸೇರಿದಂತೆ ಇನ್ನಿತರ ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶಗಳನ್ನು ಬಳಸಲಾಗುತ್ತಿದೆಯೇ ಎಂಬುದು ತಿಳಿದು ಬರಲಿದೆ.