newsics.com
ಬೆಂಗಳೂರು : ದರ್ಶನ್ ತೂಗುದೀಪಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ದರ್ಶನ್ರ ಇಬ್ಬರು ಸಹೋದರರು ಶೂರಿಟಿ ನೀಡಿದ್ದಾರೆ.
ಜಾಮೀನು ಪಡೆಯಲು ಕೆಲ ವ್ಯಕ್ತಿಗಳು ಶೂರಿಟಿ ನೀಡುವ ಜೊತೆಗೆ ನಿಗದಿತ ಹಣವನ್ನು ಡೆಪಾಸಿಟ್ ಇಡಬೇಕಾಗುತ್ತದೆ. ಈ ಕಾರ್ಯವನ್ನು ದರ್ಶನ್ರ ಸ್ವಂತ ಸಹೋದರ ದಿನಕರ್ ತೂಗುದೀಪ್ ಹಾಗೂ ಸಹೋದರನಂತಿರುವ ಧನ್ವೀರ್ ಗೌಡ ಮಾಡಿದರು.
ದಿನಕರ್ ತೂಗುದೀಪ್ ಮತ್ತು ಧನ್ವೀರ್ ಗೌಡ ಅವರುಗಳು ದರ್ಶನ್ಗೆ ಜಾಮೀನಿಗೆ ಶೂರಿಟಿ ಹಾಕಿದರಲ್ಲದೆ, ನಿಯಮದಂತೆ ಎರಡು ಲಕ್ಷ ರೂಪಾಯಿ ಹಣವನ್ನು ಡೆಪಾಸಿಟ್ ಸಹ ಮಾಡಿದ್ದಾರೆ. ಅಲ್ಲದೆ ಸೆಷನ್ಸ್ ನ್ಯಾಯಾಲಯದಲ್ಲಿ ಪಾಸ್ಪೋರ್ಟ್ ಅನ್ನು ವಶಕ್ಕೆ ನೀಡಿದ್ದಾರೆ.