newsics.com
ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಭಕ್ತರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸಪಡುತ್ತಿದ್ದಾರೆ.
ಈ ಮಧ್ಯೆ, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ಮಾರಾಮಾರಿಯಾಗಿದೆ. ಗಲಾಟೆಯಲ್ಲಿ ಜಿಲ್ಲಾಧಿಕಾರಿ ಪ್ರವೇಶ ಮಾಡಿದ್ದು, ಪೊಲೀಸರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ರಾತ್ರಿ ಹಾಸನ ನಗರಸಭೆ ಎದುರಿನ ಮುಖ್ಯದ್ವಾರದ ಬಳಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಡಿಸಿ ಕಚೇರಿ ಸಿಬ್ಬಂದಿ ಕೈ ಕೈ ಮಿಲಾಯಿಸಿದ್ದು, ಜಗಳ ಬಿಡಿಸಲು ಕಂದಾಯ ಇಲಾಖೆ ಸಿಬ್ಬಂದಿ ಹರಸಾಹಸಪಟ್ಟರು.
ದೇವಿ ದರ್ಶನಕ್ಕೆ ಬಂದ ಭಕ್ತರನ್ನು ಬಿಡುವ ವಿಚಾರಕ್ಕೆ ಎರಡು ಸರ್ಕಾರಿ ಇಲಾಖೆ ಸಿಬ್ಬಂದಿ ಪರಸ್ಪರ ಬಡಿದಾಡಿಕೊಂಡಿದ್ದು, ಕೊನೆಗೆ ಪೊಲೀಸರು ಜಿಲ್ಲಾಧಿಕಾರಿ ಸಿಬ್ಬಂದಿಯನ್ನು ಹೊರಗೆ ದಬ್ಬಿದ್ದಾರೆ.
ಶಿಷ್ಟಾಚಾರದ ವಾಹನ ತಡೆದಿದ್ದಕ್ಕೆ ಡಿಸಿ ಪಿಎ ಶಶಿ ಹಾಗೂ ಸಬ್ಇನ್ಸ್ಪೆಕ್ಟರ್, ಇನ್ಸ್ಪೆಕ್ಟರ್ ನಡುವೆ ಮಾರಾಮಾರಿ ನಡೆದಿದೆ ಎಂದು ತಿಳಿದುಬಂದಿದೆ. ಅಲ್ಲದೇ ಡಿಸಿ ಪಿಎ ಶಶಿ ಎಂಬಾತನನ್ನು ಪೊಲೀಸರು ಹೊರಗೆ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ವಿಷಯ ಗೊತ್ತಾಗುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಸಿ.ಸತ್ಯಭಾಮ ಗಮನಕ್ಕೆ ಬಂದಿದ್ದು, ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೇ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೇಳಿ ಅಮಾನತು ಮಾಡಿಸುವುದಾಗಿ ಎಚ್ಚರಿಕೆ ನಿಡಿದರು.
ಮಳವಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ರವಿ ಮತ್ತು ಡಿಸಿ ನಡುವೆ ವಾಗ್ವಾದ ನಡೆದಿದ್ದು, ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ಗೆ ಗಾಯವಾಗಿದೆ. ಕೂಡಲೇ ಚಿಕಿತ್ಸೆ ಕೊಡಿಸಿ. ನಿಮ್ಮ ಪಿಎ ವರ್ತನೆಯೇ ಘಟನೆಗೆ ಕಾರಣ ಎಂದು ಸಿಪಿಐ ರವಿ ಅವರು ಡಿಸಿಗೆ ಏರು ಧ್ವನಿಯಲ್ಲೇ ಹೇಳಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯ್ತು. ಅಂತಿಮವಾಗಿ ಗೇಟ್ ಮುಂದೆ ಕಂದಾಯ ಅಧಿಕಾರಿಗಳು ನಿಂತು ಕೆಲಸ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಆದೇಶ ನೀಡಿ ಅಲ್ಲಿಂದ ತೆರಳಿದರು ಎಂದು ವರದಿಯಾಗಿದೆ.
ರಂಗೋಲಿ ಹಾಕುತ್ತಿದ್ದ ಇಬ್ಬರ ಮೇಲೆ ಕಾರು ಚಲಾಯಿಸಿದ ಬಾಲಕ! ಬಾಲಕಿಯರ ಸ್ಥಿತಿ ಚಿಂತಾಜನಕ