ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ ಕಸಾಪ ಅಧ್ಯಕ್ಷರ ತೀರ್ಮಾನವೇ ಅಂತಿಮವಲ್ಲ: ಸಚಿವ ಚಲುವರಾಯಸ್ವಾಮಿ

newsics.com ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ತೀರ್ಮಾನವೇ ಅಂತಿಮವಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಸಮ್ಮೇಳನಾಧ್ಯಕ್ಷರ ಆಯ್ಕೆಯಲ್ಲಿ ನಾವು ಪರಂಪರೆಯನ್ನು ಮರೆಯುವಂತಿಲ್ಲ. ಸಾಹಿತಿಗಳಿಗೇ ಪ್ರಾತಿನಿಧ್ಯ ನೀಡಬೇಕಿದೆ. ಆಯ್ಕೆಯಲ್ಲಿ ಯಾವುದೇ ವೈರುಧ್ಯಗಳು ಎದುರಾಗದಂತೆ ಎಚ್ಚರ ವಹಿಸುವುದಾಗಿ ಚಲುವರಾಯಸ್ವಾಮಿ ತಿಳಿಸಿದರು. ಸಮ್ಮೇಳನಕ್ಕೆ ಸರ್ಕಾರ 30 ಕೋಟಿ ರು. ನೀಡುತ್ತಿದೆ. ಪರಿಷತ್ ಅಧ್ಯಕ್ಷರು ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದಿಲ್ಲ. ಜಿಲ್ಲಾಡಳಿತ, ಶಾಸಕರು ಎಲ್ಲರೂ ಇರುತ್ತಾರೆ. ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಸಾಹಿತಿಗಳು- ಸಾಹಿತ್ಯೇತರರ ಕುರಿತು ಏನೇ … Continue reading ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ ಕಸಾಪ ಅಧ್ಯಕ್ಷರ ತೀರ್ಮಾನವೇ ಅಂತಿಮವಲ್ಲ: ಸಚಿವ ಚಲುವರಾಯಸ್ವಾಮಿ