newsics.com
ಬೆಂಗಳೂರು: ಯುವಕನ ಕತ್ತು ಸೀಳಿ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಅರಿಶಿನಕುಂಟೆಯಲ್ಲಿ ನಡೆದಿದೆ.
ನೇಪಾಳದ ಹೇಮರಾಜು (28) ಬರ್ಬರ ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಬಿಹಾರ್ ಮೂಲದ ಲಕ್ಕಿ ಹಾಗೂ ಮುಕೇಶ್ ಎಂಬವರಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.
ಬೈಕ್ ವಿಚಾರಕ್ಕೆ ಯುವಕರು ಗಲಾಟೆ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದ್ದು, ಈ ವೇಳೆ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಕತ್ತು ಕೊಯ್ದು ಹೇಮರಾಜುವನ್ನು ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.