newsics.com
ಮುಂಬೈ: 10 ದಿನದೊಳಗೆ ರಾಜೀನಾಮೆ ಕೊಡದಿದ್ದರೆ ಕೊಲೆ ಮಾಡುತ್ತೇವೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆ ಹಾಕಲಾಗಿದೆ.
ಮುಂಬೈ ಪೊಲೀಸರಿಗೆ ಅನಾಮಿಕ ವ್ಯಕ್ತಿಯಿಂದ ಬೆದರಿಕೆ ಸಂದೇಶ ಬಂದಿದೆ. ಹೀಗಾಗಿ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ. ಮುಂಬೈ ಪೊಲೀಸರ ಸಂಚಾರ ನಿಯಂತ್ರಣ ವಿಭಾಗಕ್ಕೆ ವ್ಯಕ್ತಿಯೊಬ್ಬರು ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿ, ಯೋಗಿ ಆದಿತ್ಯನಾಥ್ 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ, ಎನ್ಸಿಪಿ ನಾಯಕ ಬಾಬಾ ಸಿದ್ದಿಕಿ ಅವರಂತೆಯೇ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಶನಿವಾರ ಸಂಜೆ ಬೆದರಿಕೆ ಸಂದೇಶ ಬಂದ ನಂತರ, ಮುಂಬೈ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ ಮತ್ತು ಬೆದರಿಕೆಯ ಹಿಂದೆ ಅಪರಿಚಿತ ವ್ಯಕ್ತಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.