newsics.com
ಬೆಂಗಳೂರು: ಹಬ್ಬದ ದಿನ ಸತ್ತರ ಸ್ವರ್ಗ ಪ್ರಾಪ್ತಿಯಾಗುತ್ತೆ ಎನ್ನುವ ಭ್ರಮೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಭೂಸಂದ್ರದಲ್ಲಿ ನಡೆದಿದೆ.
ಭೂಸಂದ್ರದ ಕೃಷ್ಣಮೂರ್ತಿ(40) ಮೃತ ದುರ್ದೈವಿ. ನಿನ್ನೆ(ನವೆಂಬರ್ 02) ದೀಪಾವಳಿ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿ ಬಗ್ಗೆ ಚರ್ಚೆ ನಡೆಸಿದ್ದಾನೆ. ಬಳಿಕ ನೇಣುಬಿಗಿದ್ದುಕೊಂಡು ಸಾವಿಗೆ ಶರಣಾಗಿದ್ದಾನೆ.
ಪತ್ನಿಯನ್ನ ಕೊಂದು ಜೈಲು ಸೇರಿದ್ದ. ಎರಡು ವರ್ಷ ಜೈಲಿನಲ್ಲಿ ಇದ್ದು ಕಳೆದ 6 ತಿಂಗಳ ಹಿಂದೆ ಬಿಡುಗಡೆಯಾಗಿ ಆಚೆ ಬಂದಿದ್ದ. ಆದರೆ ತಲೆಯಲ್ಲಿ ಅದೇಗೆ ಯೋಚನೆ ಬಂತೋ ಏನೋ ನಿನ್ನೆ ಸ್ನೇಹಿತರೊಂದಿಗೆ ಹಬ್ಬ ದಿನ ಸತ್ತರೆ ಸ್ವರ್ಗ ಪ್ರಾಪ್ತಿ ಬಗ್ಗೆ ಚರ್ಚಿಸಿ ಬಳಿಕ ಸಾವಿಗೆ ಶರಣಾಗಿದ್ದಾನೆ.