Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಭಿನ್ನ ದೃಷ್ಟಿಕೋನದ ನಟ, ನಿರ್ದೇಶಕ ಗುರುಪ್ರಸಾದ್ ಸಾವಿನ ಮನೆಯ ಕದ ತಟ್ಟಿದ್ದೇಕೆ? ಅಂಥದ್ದೇನಾಗಿತ್ತು?
ಕರ್ನಾಟಕಪ್ರಮುಖಮನರಂಜನೆ

ವಿಭಿನ್ನ ದೃಷ್ಟಿಕೋನದ ನಟ, ನಿರ್ದೇಶಕ ಗುರುಪ್ರಸಾದ್ ಸಾವಿನ ಮನೆಯ ಕದ ತಟ್ಟಿದ್ದೇಕೆ? ಅಂಥದ್ದೇನಾಗಿತ್ತು?

Share
2 Min Read
SHARE

newsics.com

ಬೆಂಗಳೂರು: ನಟ, ನಿರ್ದೇಶಕ, ಸ್ಯಾಂಡಲ್ ವುಡ್ ನ ವಿನೂತನ ಡೈರೆಕ್ಟರ್ ಎಂದೇ ಖ್ಯಾತಿ ಗಳಿಸಿದ್ದ ಗುರುಪ್ರಸಾದ್ ಸಾವು ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಸಿನಿಮಾಗಳಲ್ಲಿ ಆಸ್ಮಸ್ಥೈರ್ಯದ ಪ್ರತೀಕದಂತೆ ಕಾಣುತ್ತಿದ್ದ ಅವರು ಆತ್ಮಹತ್ಯೆಗೆ ಶರಣಾಗಲು ಕಾರಣ ಏನು?

ಕೋರ್ಟ್ ಕೇಸ್ ಗುರುಪ್ರಸಾದ್ ಅವರನ್ನು ಹೈರಾಣಾಗಿಸಿತ್ತು ಎನ್ನಲಾಗಿದೆ. ಶ್ರೀನಿವಾಸ್ ಗೌಡ ಎಂಬುವರ ಜತೆ ಹಣದ ವ್ಯವಹಾರ ಇತ್ತು, ಗುರು ಪ್ರಸಾದ್ ಅವರಿಗೆ 25 ಲಕ್ಷ ಹಣ ಕೊಟ್ಟಿದ್ದರು ಶ್ರೀನಿವಾಸ್ ಗೌಡ. ಶ್ರೀನಿವಾಸ್ ಗೌಡ ಗುರು ಪ್ರಸಾದ್ ಅವರ ಅಭಿಮಾನಿ ಆಗಿದ್ದರಂತೆ. ಅವರ ಬರವಣಿಗೆ ಮೆಚ್ಚಿ ಅವರ ಜತೆ ಇದ್ರು ಎನ್ನಲಾಗಿದೆ. ಹಣ ವಾಪಸ್ ಕೊಡಲಾಗದೇ ಗುರುಪ್ರಸಾದ್ ಸಮಸ್ಯೆ ಮಾಡಿಕೊಂಡಿದ್ದರಂತೆ.

ಶ್ರೀನಿವಾಸ್ ಗೌಡ ಅವರ ಜತೆಗಿನ ಈ ಹಣದ ವ್ಯವಹಾರ ಕೋರ್ಟ್ ಮೆಟ್ಟಿಲೇರಿತ್ತು. ಕಳೆದ 24 ನೇ ತಾರೀಖು ಕೋರ್ಟ್ ವಿಚಾರಣೆ ಇತ್ತು. ಮೆಡಿಕಲ್ ರಿಪೋರ್ಟ್ ಕೊಟ್ಟು ಪ್ರಕರಣ ಮುಂದಕ್ಕೆ ಹಾಕಿಸಿಕೊಂಡಿದ್ರು ಗುರುಪ್ರಸಾದ್. ನಿನ್ನೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ವಿಶ್ ಮಾಡಲು ಯಾರೇ ಫೋನ್ ಕಾಲ್ ಮಾಡಿದರೂ ಗುರುಪ್ರಸಾದ್ ಪಿಕ್ ಮಾಡಿಲ್ಲ, ಆಗ ಹಲವರಿಗೆ ಶಾಕ್ ಆಗಿದ್ದು, ಬಳಿಕ ವಿಷಯ ಬೆಳಕಿಗೆ ಬಂದಿದೆ.

ಕನ್ನಡದ ನಿರ್ದೇಶಕ ಗುರು ಪ್ರಸಾದ್ ಅವರು ‘ಇನ್ಸ್ ಟ್ಯೂಟ್ ಆಪ್ ಸ್ಕ್ರಿಪ್ಟ್ ರೈಟಿಂಗ್ ಹಾಗೂ ಡೈರೆಕ್ಷನ್ ಅನ್ನೋ ಸ್ಕೂಲ್ ನಡೆಸುತ್ತಿದ್ದರು. ಜಿಯೋ ಸ್ವಾದ್ ಅನ್ನೋ ಶಾಲೆ ಸಹ ನಡೆಸುತ್ತಿದ್ರು ಎನ್ನಲಾಗಿದೆ. ರಂಗನಾಯಕ ಸಿನಿಮಾ ನಿರ್ದೇಶನ ಕೂಡ ಮಾಡ್ತಾ ಇದ್ರು. ಆದರೆ, ಇದೀಗ ಸಾವಿಗೆ ಶರಣಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಎನ್ನಲಾಗುತ್ತಿದೆ. ಮೃತರಾಗಿ ಹತ್ತು ದಿನಗಳು ಆಗಿದ್ದಿರಬಹುದು ಎನ್ನಲಾಗುತ್ತಿದ್ದು, ಕೊಳೆತ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ.

2006 ರಲ್ಲಿ ‘ಮಠ’ ಸಿನಿಮಾ ಮೂಲಕ ನಿರ್ದೇಶಕ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಮಠ, ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್ , ಎರಡನೇ ಸಲ ಸಿನಿಮಾಗಳನ್ನು ನಿರ್ದೇಶಿಸಿದ್ರು. ‘ರಂಗನಾಯಕ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು. ರಂಗನಾಯಕ ಚಿತ್ರದ ಸುದ್ದಿಗೋಷ್ಠಿ ವೇಳೆಯೂ ಸಾಕಷ್ಟು ಸುದ್ದಿಯಾಗಿದ್ದರು. ಕನ್ನಡದ ಬಗ್ಗೆ, ಕನ್ನಡ ಸಿನಿಮಾ ಬಗ್ಗೆ ಬಹಳಷ್ಟು ಕನಸುಗಳನ್ನು ಕಟ್ಟಿಕೊಂಡಿದ್ದರು.

ಬಿಗ್ ಬಾಸ್ ಸೇರಿದಂತೆ, ಕಿರುತೆರೆಯಲ್ಲೂ ಸಾಕಷ್ಟು ರಿಯಾಲಿಟಿ ಶೋಗಳಲ್ಲಿ ಭಾಗಿ ಆಗಿದ್ರು. ಬಿಗ್ ಬಾಸ್‌ನಲ್ಲೂ ಮಿಂಚಿದ್ದ ಗುರುಪ್ರಸಾದ್, ವಿವಾದಗಳಿಂದಲೂ ಆಗಾಗ ಹೆಸರುವಾಸಿಯಾಗಿದ್ದರು. ಇದೀಗ ಆತ್ಮಹತ್ಯೆ ಮೂಲಕ ಗುರುಪ್ರಸಾದ್ ಸಿನಿಪ್ರಿಯರ ಕಣ್ಣಲ್ಲಿ ನೀರು ತರಿಸಿದ್ದಾರೆ. ಯಾಕೆ ಆತ್ಮಹತ್ಯೆ ಮಾಡಿಕೊಂಡರು? ಅಂತಹ ಕಾರಣವೇನಿತ್ತು ಎಂಬುದು ಇನ್ನಷ್ಟೇ ಬಹಿರಂಗ ಆಗಬೇಕಿದೆ.

ಗುರುಪ್ರಸಾದ್ ಸಾವಿನ ಸಂಗತಿ ತಿಳಿದು ಕನ್ನಡ ಸಿನಿಪ್ರಿಯರು ದಿಗ್ಭ್ರಾಂತರಾಗಿದ್ದಾರೆ.

ನೇಣು ಬೀಗಿದುಕೊಂಡು ನಟ ಗುರುಪ್ರಸಾದ್‌ ಆತ್ಮಹತ್ಯೆ

ಹಿಜಾಬ್ ವಿರೋಧಿಸಿ ಮೈಮೇಲಿದ್ದ ಬಟ್ಟೆ ತೆಗೆದ ಮಹಿಳೆ: ವಿಡಿಯೋ ವೈರಲ್

TAGGED:Why did actor and director Guruprasad succumb to death?
Share This Article
Facebook Twitter Copy Link Print
Previous Article ನಾಳೆಯಿಂದ ಶಾಸಕ ಯತ್ನಾಳ್ ‘ಅಹೋರಾತ್ರಿ’ ಧರಣಿ
Next Article ದೀಪಾವಳಿ ದಿನ ಕಂತೆಕಂತೆ ನೋಟುಗಳಿಗೆ ಬೆಂಕಿ; ವಿಡಿಯೋ  ವೈರಲ್

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?