newsics.com
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ನ.6ರಂದು ಮೈಸೂರು ಲೋಕಾಯುಕ್ತ ಕಚೇರಿಗೆ ಹಾಜರಾಗುವಂತೆ ತಿಳಿಸಲಾಗಿದೆ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ಹಾಜರಾಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ..
ಮುಡಾ ಹಗರಣ ಸಂಬಂಧ ಈಗಾಗಲೇ ಎ2 ಆರೋಪಿ ಪಾರ್ವತಿ ಸಿದ್ದರಾಮಯ್ಯ, ಎ3 ಆರೋಪಿ ಮಲ್ಲಿಕಾರ್ಜುನಯ್ಯ ಹಾಗೂ ಎ4 ಆರೋಪಿ ಸೇರಿದಂತೆ ಹಲವರ ವಿಚಾರಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಸಿಎಂಗೆ ನೋಟಿಸ್ ನೀಡಿದ್ದಾರೆ.