newsics.com
ದಾಂಡೇಲಿ: ಧಾರವಾಡದಿಂದ ದಾಂಡೇಲಿಗೆ ಬರುತ್ತಿದ್ದೆ ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಅಸುನೀಗಿದ್ದಾರೆ.
ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ದೂರು ಗ್ರಾಮದ ಕಲ್ಲೋಳಿಯವರ ಓಣಿ ನಿವಾಸಿಯಾಗಿರುವ 57 ವರ್ಷ ವಯಸ್ಸಿನ ಪುಂಡಲಿಕ್ ಚಂದರಗಿ ಎಂಬುವರೇ ಮೃತಪಟ್ಟ ಪ್ರಯಾಣಿಕ. ಇವರು ಧಾರವಾಡದಿಂದ ಸಾರಿಗೆ ಬಸ್ಸಿನಲ್ಲಿ ದಾಂಡೇಲಿಗೆ ಬರುತ್ತಿದ್ದಾಗ ಹೃದಯಾಘಾತವಾಗಿದೆ. ದಾಂಡೇಲಿಗೆ ಬಸ್ ಬರುತ್ತಿದ್ದಂತೆಯೇ ಬಸ್ ನಿಲ್ದಾಣದಲ್ಲಿ ಇತರ ಪ್ರಯಾಣಿಕರು ನಿರ್ವಾಹಕರಿಗೆ ಮಾಹಿತಿ ನೀಡಿದ್ದಾರೆ. ಕುಳಿತಲ್ಲೇ ಮಲಗಿದ್ದ ಸ್ಥಿತಿಯಲ್ಲಿದ್ದ ಇವರು ಏನು ಮಾಡಿದರೂ ಎಚ್ಚರಗೊಳ್ಳದಿದ್ದಾಗ ಬಸ್ಸಿನ ನಿರ್ವಾಹಕ ತಕ್ಷಣವೇ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸಾರಿಗೆ ಸಂಸ್ಥೆಯ ಅಧಿಕಾರಿಗಳು ಸಾರ್ವಜನಿಕ ಆಸ್ಪತ್ರೆಗೆ ಮಾಹಿತಿಯನ್ನು ನೀಡಿ ಆಂಬುಲೆನ್ಸ್ ತರಿಸಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ.
ರಾಜ್ಯದ 53 ಐತಿಹಾಸಿಕ ಸ್ಮಾರಕಗಳಿಗೂ ವಕ್ಫ್ ನೋಟಿಸ್, ಬೀದರ್ನ ಇಡೀ ಗ್ರಾಮವೇ ವಕ್ಫ್ಗೆ ಸೇರಿದ್ದಂತೆ!
ಇದು ಅಂತಿಂಥ ಎಮ್ಮೆಯಲ್ಲ, 3 ಸಾವಿರ ಕೆಜಿ ತೂಕದ ಈ ಎಮ್ಮೆ ನೋಡಿದರೆ ಭಯವಾಗತ್ತೆ!