newsics.com
ಬೆಂಗಳೂರು: ಮುಡಾ, ವಾಲ್ಮೀಕಿ ನಿಗಮ ಹಗರಣ, ವಕ್ಫ್ ಆಸ್ತಿ ವಿವಾದಗಳಿಂದ ಕಂಗೆಟ್ಟಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ಆರೋಪಿಸಿದ್ದು, ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ನ.20ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಿದೆ.
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ವಿರುದ್ಧವೂ ದೂರು ದಾಖಲಿಸಿದೆ. ತಿಮ್ಮಾಪುರ ಅವರ ಖಾತೆ ಬದಲಾವಣೆ ಮಾಡುವಂತೆ ಸಿಎಂಗೆ ಒತ್ತಾಯಿಸಿದ್ದಾರೆ. ಭ್ರಷ್ಟಾಚಾರದ ಬಗ್ಗೆ ದೂರು ನೀಡಿ ಕೆಲ ತಿಂಗಳ ಹಿಂದೆ ಸಿಎಂ, ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಸಂಘ ಇದೀಗ ಮತ್ತೆ ಉದ್ಯಮಗಳನ್ನು ಮುಚ್ಚುವುದಾಗಿ ಬೆದರಿಕೆ ಪತ್ರ ರವಾನಿಸಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಬಕಾರಿ ನಿರೀಕ್ಷಕರಿಂದ ತಲಾ 40 ಲಕ್ಷ ಹಾಗೂ ಬೆಂಗಳೂರಿನಿಂದ ಹೊರಗೆ ಕಾರ್ಯನಿರ್ವಹಿಸುತ್ತಿರುವ ಅಬಕಾರಿ ಅಧೀಕ್ಷಕರಿಂದ 25 ಲಕ್ಷ ರೂಪಾಯಿ ವಸೂಲಿ ಮಾಡುತ್ತಿದ್ದಾರೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. 18 ಕೋಟಿ ವಸೂಲಿ ಮಾಡಿದ್ದು, ಅದರಲ್ಲಿ 13 ಕೋಟಿ ರೂ.ಗಳನ್ನು ಸಚಿವ ತಿಮ್ಮಾಪುರ್ ಅವರಿಗೆ ನೀಡಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ವಿರೋಧ ಪಕ್ಷ ಬಿಜೆಪಿ ಈಗ ಸಿದ್ದರಾಮಯ್ಯನವರ ಸಂಪುಟದಿಂದ ತಿಮ್ಮಾಪುರ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಸಲ್ಮಾನ್ಗೆ ಬೆದರಿಕೆ ಹಾಕಿದ್ದ ಆರೋಪಿ ತುಮಕೂರಲ್ಲಿ ಬಂಧನ
ವಾಯುಪಡೆಯ ಯುದ್ಧ ವಿಮಾನ ಮಿಗ್ 29 ಪತನ, ಜಿಗಿದು ಜೀವ ಉಳಿಸಿಕೊಂಡ ಪೈಲಟ್
ಎಡಿಜಿಪಿ ಚಂದ್ರಶೇಖರ್ ದೂರು: ಎಚ್ಡಿಕೆ, ನಿಖಿಲ್, ಸುರೇಶ್ಬಾಬು ವಿರುದ್ಧ ಎಫ್ಐಆರ್