newsics.com
ನವದೆಹಲಿ: ದೇಶದ ಪ್ರಸಿದ್ಧ ಜಾನಪದ ಗಾಯಕಿ, ‘ಬಿಹಾರದ ಕೋಗಿಲೆ’ ಎಂದೇ ಜನಪ್ರಿಯರಾಗಿದ್ದ ಶಾರದಾ ಸಿನ್ಹಾ (72) ಮಂಗಳವಾರ ನಿಧನರಾದರು.
ಸೆಪ್ಪಿಸೇಮಿಯಾ ಸೇರಿದಂತೆ ಇತರೆ ಗಂಭೀರ ಸ್ವರೂಪದ ಖಾಯಿಲೆಗಳಿಂದ ಅವರು ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ 9:20ರ ಸಮಯದಲ್ಲಿ ಶಾರದಾ ಕೊನೆಯುಸಿರೆಳೆದರು.
ಸೆಪ್ಪಿಸೇಮಿಯಾ ಎಂದರೆ ವೈದ್ಯಕೀಯ ಪರಿಭಾಷೆಯಲ್ಲಿ ರಕ್ತ ವಿಷಕಾರಿಯಾಗುವಿಕೆ ಎಂದರ್ಥ. ಶಾರದಾ ಸಿನ್ಹಾ ಅವರು ಇದಲ್ಲದೇ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದಲೂ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಶಾರದಾ ಸಿನ್ಹಾ 1970ರಿಂದಲೂ ಸಂಗೀತ ಕ್ಷೇತ್ರದಲ್ಲಿ ಹೆಸರಾದ ಚೇತನ. ಭೋಜ್ಪುರಿ, ಮೈಥಿಲಿ ಮತ್ತು ಹಿಂದಿ ಜಾನಪದ ಸಂಗೀತಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಬಿಹಾರದ ಜಾನಪದ ಲೋಕಕ್ಕೆ ಸಿನ್ಹಾ ಸಾಂಸ್ಕೃತಿಕ ರಾಯಭಾರಿಯಂತಿದ್ದರು. ಅದರಲ್ಲೂ ವಿಶೇಷವಾಗಿ ಚತ್ ಗೀತೆ ಎಂದರೆ ತಕ್ಷಣ ಇವರ ಹೆಸರೇ ಜನಜನಿತ. ಈ ಹಿನ್ನೆಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಶಾರದಾ ಸಿನ್ಹಾರ ಹೆಸರು ಚತ್ ಉತ್ಸವದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿತ್ತು. ಬಿಹಾರ ಹಾಗೂ ಉತ್ತರ ಭಾರತದ ವಿವಿಧೆಡೆ ಈ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ.
ಹಮ್ ಆಪ್ ಕೇ ಕೌನ್’ ಸಿನಿಮಾದ ‘ಬಾಬುಲ್’ ಹಾಡು ಇವರಿಗೆ ಹೆಚ್ಚು ಖ್ಯಾತಿ ತಂದುಕೊಟ್ಟಿತ್ತು.
ಶಾರದಾ ಸಿನ್ಹಾ ಕಲಾಸೇವೆಯನ್ನು ಪರಿಗಣಿಸಿ 2018ರಲ್ಲಿ ಕೇಂದ್ರ ಸರ್ಕಾರ ‘ಪದ್ಮಭೂಷಣ’ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದಲ್ಲದೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳೂ ಅವರಿಗೆ ಸಂದಿವೆ. ಶಾರದಾ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
https://x.com/narendramodi/status/1853848271791493458?t=8zwjuDjNk9jKF98spDZTig&s=19
ಮಾರುಕಟ್ಟೆಗೆ ಬಂತು ಹೊಸ ರೂಪದ ಟಾಟಾ ನ್ಯಾನೋ ಕಾರು, ಫುಲ್ ಡಿಫರೆಂಟ್ ಲುಕ್