newsics.com
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಹಾಗೂ ನಟ ದರ್ಶನ್ ಆಪ್ತೆ ಪವಿತ್ರಾಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 21ಕ್ಕೆ ಮುಂದೂಡಿ ಆದೇಶಿಸಿದೆ.
ಈ ಹಿಂದೆ ಸೆಷನ್ಸ್ ಕೋರ್ಟ್ನಲ್ಲಿ ಜಾಮೀನು ಅರ್ಜಿಯನ್ನು ವಜಾಗೊಂಡ ಹಿನ್ನೆಲೆಯಲ್ಲಿ ಪವಿತ್ರಾಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ನ ಏಕಸದಸ್ಯ ಪೀಠವು ಈ ಆದೇಶ ನೀಡಿದೆ.
ವಾದಕ್ಕೆ ಕಾಲಾವಕಾಶ ಕೋರಿದ್ದ ಆರೋಪಿಗಳ ಪರ ವಕೀಲರ ಮನವಿ ಮೇರೆಗೆ ಆರೋಪಿಗಳಾದ ಅನುಕುಮಾರ್, ನಾಗರಾಜ್, ಲಕ್ಷ್ಮಣ್ ಅವರ ಜಾಮೀನು ಅರ್ಜಿಯನ್ನೂ ಕೋರ್ಟ್ ಅದೇ ದಿನಾಂಕಕ್ಕೆ ಮುಂದೂಡಿದೆ. ಸದ್ಯ ಹತ್ಯೆ ಪ್ರಕರಣದ 2ನೇ ಆರೋಪಿ ನಟ ದರ್ಶನ್ ಆರೋಗ್ಯ ಸಮಸ್ಯೆಯ ಆಧಾರದ ಮೇಲೆ 6 ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಗೊಂಡಿದ್ದು, ಬಿಜಿಎಎಸ್ ಆಸ್ಪತ್ರೆಯಲ್ಲಿ ಬೆನ್ನುನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.