newsics.com
ಮಂಡ್ಯ: ಟಿಪ್ಪು ಜಯಂತಿ ಹಿನ್ನೆಲೆ ನಾಳೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.
ಇನ್ನು ಶ್ರೀರಂಗಪಟ್ಟಣದಲ್ಲಿ ಜನರು ಗುಂಪುಗೂಡುವಂತಿಲ್ಲ , ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ, ಯಾವುದೇ ಸಭೆ ಮೆರವಣಿಗೆ ಮಾಡುವಂತಿಲ್ಲ, ಪಟಾಕಿ ಸಿಡಿಸುವಂತಿಲ್ಲ ಎಂದು ಆದೇಶಿಸಲಾಗಿದೆ.