newsics.com
ಬೆಂಗಳೂರು : ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಎಗರಿಸುತ್ತಿದ್ದ ದಂಪತಿಯನ್ನ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸರು ಬಂಧಿಸಿದ್ದಾರೆ.
ಪತಿ ಜೀವನ್ ಅಲಿಯಾಸ್ ಜೀವ (30), ಪತ್ನಿ ಆಶಾ (30) ಬಂಧಿತರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದವರಾದ ಬಂಧಿತರಿಂದ 17 ಲಕ್ಷ ಮೌಲ್ಯದ 240 ಗ್ರಾಂ ಚಿನ್ನಾಭರಣ, 90 ಗ್ರಾಂ ಬೆಳ್ಳಿ ಜಪ್ತಿ ಮಾಡಲಾಗಿದೆ.
ಒಂಟಿ ಮಹಿಳೆಯರು ವಾಸಿಸುತ್ತಿದ್ದ ಸ್ಥಳ ಗುರುತಿಸುತ್ತಿದ್ದ ಪತ್ನಿ ಆಶಾ, ಬಳಿಕ ಪತಿ ಜೀವನ್ ಜತೆ ತೆರಳಿ ಕೃತ್ಯವೆಸಗುತ್ತಿದ್ದರು. ಜ್ಯುವೆಲರಿ ಅಂಗಡಿಗೆ ತೆರಳಿ ಕಷ್ಟ ಇದೆ ಅಂತಾ ಹೇಳಿ ಚಿನ್ನಾಭರಣ ಮಾರಾಟ ಮಾಡಿ ಬರುತ್ತಿದ್ದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದರು.