newsics.com
ನವದೆಹಲಿ: ಭಾರತವನ್ನು ಅಸ್ಥಿರಗೊಳಿಸುವ ಭಯೋತ್ಪಾದಕ ಗುಂಪು ಅಲ್-ಖೈದಾ ಸಂಚಿನ ಭಾಗವಾಗಿ ಕೆಲವು ಬಾಂಗ್ಲಾದೇಶಿ ಪ್ರಜೆಗಳು ಉತ್ತೇಜಿಸಿದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ದೇಶದಾದ್ಯಂತ ಅನೇಕ ಸ್ಥಳಗಳಲ್ಲಿ ವ್ಯಾಪಕ ಶೋಧ ನಡೆಸಿತು.
ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ತ್ರಿಪುರಾ ಮತ್ತು ಅಸ್ಸಾಂನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ಶಂಕಿತ ವ್ಯಕ್ತಿಗಳೊಂದಿಗೆ ಸಂಬಂಧ ಹೊಂದಿರುವ ಒಂಬತ್ತು ಸ್ಥಳಗಳಲ್ಲಿ ಸೋಮವಾರ ಮುಂಜಾನೆ ಶೋಧ ಕಾರ್ಯಾಚರಣೆ ಆರಂಭವಾಯಿತು ಎಂದು ಎನ್ಐಏ ತಿಳಿಸಿದೆ.
ಈ ಶೋಧ ವೇಳೆ ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ ಫೋನ್ಗಳು ಸೇರಿದಂತೆ ಡಿಜಿಟಲ್ ಸಾಧನಗಳು ಮತ್ತು ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆಯಲಾಯಿತು ಎಂದು NIA ಹೊರಡಿಸಿದ ಅಧಿಕೃತ ಹೇಳಿಕೆ ತಿಳಿಸಿದೆ.
ಬಾಂಗ್ಲಾದೇಶದ ಪಿತೂರಿಯ ಭಾಗವಾಗಿ 2023 ರ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ನಡೆಸುತ್ತಿರುವ ತನಿಖೆಗೆ ಪೂರಕವಾಗಿ ಈ ಶೋಧ ನಡೆದಿದೆ.