Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಪ ಚುನಾವಣೆ ಬಳಿಕ ಸಂಪುಟ ಪುನಾರಚನೆ: ಆರೇಳು ಸಚಿವರಿಗೆ ಕೊಕ್, ಆಡಳಿತ ಯಂತ್ರದಲ್ಲೂ ಭಾರೀ ಬದಲಾವಣೆ ಸಾಧ್ಯತೆ
ಕರ್ನಾಟಕಪ್ರಮುಖ

ಉಪ ಚುನಾವಣೆ ಬಳಿಕ ಸಂಪುಟ ಪುನಾರಚನೆ: ಆರೇಳು ಸಚಿವರಿಗೆ ಕೊಕ್, ಆಡಳಿತ ಯಂತ್ರದಲ್ಲೂ ಭಾರೀ ಬದಲಾವಣೆ ಸಾಧ್ಯತೆ

Share
2 Min Read
SHARE

newsics.com

ಬೆಂಗಳೂರು: ಉಪ ಚುನಾವಣೆ ಮುಗಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ದಟ್ಟವಾಗಿದೆ.

ಈ‌ ಮೂಲಕ ಆಡಳಿತಕ್ಕೆ ಚುರುಕು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಅಲ್ಲದೆ, ಆಡಳಿತ ಯಂತ್ರದಲ್ಲೂ ಭಾರೀ ಬದಲಾವಣೆ ತರುವ ಸಾಧ್ಯತೆಗಳಿವೆ.

ಮೂಲಗಳ ಪ್ರಕಾರ, ಪ್ರಸ್ತುತ ಸಚಿವ ಸಂಪುಟದಲ್ಲಿ ನಿಷ್ಕ್ರಿಯರಾಗಿರುವ ಹಾಗೂ ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗಿರುವ ಆರೇಳು ಸಚಿವರನ್ನು ಬದಲಾಯಿಸಿ, ಆ ಸ್ಥಾನಕ್ಕೆ ಅರ್ಹರನ್ನು ತರುವ ಚಿಂತನೆಯನ್ನು ಸಿದ್ದರಾಮಯ್ಯ ಹೊಂದಿದ್ದಾರೆ ಎನ್ನಲಾಗಿದೆ.

ಯಾರೆಲ್ಲ ಹೊರಕ್ಕೆ?:

ಹಾಲಿ ಸಂಪುಟದಲ್ಲಿ ತೀವ್ರ ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ನಿಷ್ಕ್ರಿಯರಾಗಿದ್ದಾರೆ ಎನ್ನಲಾದ ಎಸ್.ಎಸ್. ಮಲ್ಲಿಕಾರ್ಜುನ್, ಕೆ.ಎನ್. ರಾಜಣ್ಣ, ಬೋಸರಾಜು ಮೊದಲಾದ ಆರೇಳು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಪಟ್ಟಿಯಲ್ಲಿ ಖಾತೆಯನ್ನು ಸಮರ್ಪಕವಾಗಿ ನಿಭಾಯಿಸದ, ಭ್ರಷ್ಟಾಚಾರದ ಆರೋಪಗಳಿರುವ, ವಿವಾದಾತ್ಮಕ ಹೇಳಿಕೆ ನೀಡುತ್ತಾ ಸರ್ಕಾರ ಮತ್ತು ಪಕ್ಷದ ವರ್ಚಸ್ಸು ಕುಂದುವಂತೆ ಮಾಡಿದ ಸಚಿವರನ್ನು ಕೈಬಿಟ್ಟು ಹೊಸಬರನ್ನು ಸಂಪುಟಕ್ಕೆ ಸೇರಿಸಲು ಮುಹೂರ್ತ ನಿಗದಿ ಮಾಡಲಾಗಿದೆ.

ಸಂಪುಟ ಪುನಾರಚನೆಗೂ ಮುನ್ನ ವಾಲ್ಮೀಕಿ ಹಗರಣದಿಂದ ಬಿ. ನಾಗೇಂದ್ರ ದೋಷಮುಕ್ತರಾದರೆ ವಾಪಸು ಸಚಿವ ಸಂಪುಟ ಸೇರುವ ಲಕ್ಷಣಗಳಿವೆ. ಹೊಸಬರಿಗೆ ಮಣೆ ಹಾಕಲು ಹೈಕಮಾಂಡ್‌ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಭಾರೀ ಆಡಳಿತಾತ್ಮಕ ಬದಲಾವಣೆ ಮಾಡುವ ಸಾಧ್ಯತೆಯೂ ಇದೆ. ಮುಖ್ಯವಾಗಿ ಮುಖ್ಯಮಂತ್ರಿ ಕಚೇರಿಯ ಅಧಿಕಾರಿ ವರ್ಗವನ್ನು ಬದಲಾಯಿಸುವ ಚಿಂತನೆ ಮುಖ್ಯಮಂತ್ರಿಯವರಿಗೆ ಇದೆ ಎಂದು ಹೇಳಲಾಗಿದೆ.

ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ

ಈ‌ ಮಧ್ಯೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಸ್ಥಾನ ಕಳೆದುಕೊಂಡು ಜೈಲು ಪಾಲಾಗಿದ್ದ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವ ಸುಳಿವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ.
ಮೈಸೂರಿನ ಎಚ್.ಡಿ.ಕೋಟೆಯ ಕಾರ್ಯಕ್ರಮದಲ್ಲಿ ಮುಖಂಡರು, ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅನಿಲ್ ಚಿಕ್ಕಮಾದುಗೆ ಸ್ಥಾನ ಕೊಡಲು ಸಾಧ್ಯವಿಲ್ಲ. ಸುಮ್ಮನೆ ಸುಳ್ಳು ಹೇಳಲ್ಲ. ಆದರೆ, ನಾಗೇಂದ್ರ ಅವರಿಗೆ ಸಚಿವ ಸ್ಥಾನ ಕೊಡಬೇಕು, ಕೊಡ್ತೀನಿ ಎಂದರು.

ಶೀಘ್ರದಲ್ಲಿಯೇ ಹೈಡ್ರೋಜನ್ ರೈಲಿಗೆ ಚಾಲನೆ; ಇದರ ವಿಶೇಷತೆ..?

ನ. 15ರಿಂದ ಕಡಲೆಕಾಯಿ ಪರಿಷೆ, 8 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ

ಮುಂದಿನ ಐದು ದಿನಗಳ ಕಾಲ ಭಾರೀ ಮಳೆ!; ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯದ 3 ಕ್ಷೇತ್ರಗಳಿಗಿಂದು ಉಪ‌ ಚುನಾವಣೆ: 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಇದೇ ರೊಮ್ಯಾನ್ಸ್‌ಗೆ ಅತ್ಯುತ್ತಮ ಸಮಯ… ಈ ವೇಳೆ ಭಯವಿಲ್ಲದೆ‌ ನೀವು ‘ಒಂದಾಗಬಹುದು’!

TAGGED:Cabinet reshuffle after the by-elections: Coke for six ministersthere is a possibility of major changes in the administrative
Share This Article
Facebook Twitter Copy Link Print
Previous Article ಮುಡಾ ಹಗರಣ: ಸಿದ್ದರಾಮಯ್ಯ ಆಪ್ತನಿಗೆ ಇಡಿ ಡ್ರಿಲ್
Next Article ದಿನ ಭವಿಷ್ಯ… 13-11-2024, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?