newsics.com
ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ಇಂಜಿನಿಯರ್ ಆಗಿರುವ ವಧು ಶಿವಕುಮಾರ್ ಮತ್ತು ಮಂಡ್ಯ ನಿವಾಸಿ ಸಂಗೀತಾ ಅವರು ನವೆಂಬರ್ 11ರಂದು ಸರಳ ವಿವಾಹವಾಗಿದ್ದಾರೆ. ಆ ಮೂಲಕ ರೂ. 5 ಲಕ್ಷಕ್ಕೂ ಹೆಚ್ಚು ಹಣವನ್ನು ಉಳಿಸಿದ್ದಾರೆ.
ನವಜೋಡಿ ಉಳಿಸಿದ 5 ಲಕ್ಷಕ್ಕೂ ಹೆಚ್ಚಿನ ಹಣದಿಂದ 26 ಶಾಲೆಗೆ ಶುದ್ಧ ನೀರಿನ ಯಂತ್ರ ನೀಡಿದ್ದಾರೆ. ಆ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಈ ಕೆಲಸ ಮಾಡಲು ನವಜೋಡಿಗೆ ರೈತಪರ ಹೋರಾಟಗಾರರಾದ ತಾತ ಹೊ.ತಿ.ಹುಚ್ಚಪ್ಪ ಅವರು ಪ್ರೇರಣೆ ಎಂದಿದ್ದಾರೆ.