newsics.com
ಬೀದರ್: ಒಗ್ಗರಣೆ ಅನ್ನ ಸೇವಿಸಿ 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಬೀದರ್ ನ ಬಸವತೀರ್ಥ ವಿದ್ಯಾಪೀಠ ಶಾಲೆಯಲ್ಲಿ ನಡೆದಿದೆ.
ಒಗ್ಗರಣೆ ಅನ್ನ ತಿಂದು 50 ಮಕ್ಕಳಿಗೆ ವಾಂತಿ ಬೇಧಿ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾತ್ರಿ ಉಳಿದಿದ್ದ ಅನ್ನಕ್ಕೆ ಬೆಳಿಗ್ಗೆ ಒಗ್ಗರಣೆ ಹಾಕಿ ಮಕ್ಕಳಿಗೆ ಬಡಿಸಲಾಗಿತ್ತು. ಒಗ್ಗರಣೆ ಅನ್ನ ತಿಂದ ಬಳಿಕ ವಾಂತಿ-ಬೇಧಿ ಕಾಣಿಸಿಕೊಂಡಿದ್ದು, ಮಕ್ಕಳ ಸ್ಥಿತಿ ಗಂಭೀರವಾಗಿದೆ. ತಕ್ಷಣ ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಮಕ್ಕಳ ಆರೋಗ್ಯ ಸುಧಾರಿಸುತ್ತಿದ್ದು, ಆಸ್ಪತ್ರೆಗೆ ಶಾಸಕ ಭೀಮರಾವ್ ಪಾಟೀಕ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ವಿದ್ಯಾಪೀಠಕ್ಕೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಉಳಿದವರ ಆರೋಗ್ಯ ತಪಾಸಣೆ ನಡೆಸಿದ್ದಾರೆ.
ನಿನ್ನೆ ರಾತ್ರಿ ಉಳಿದ ಅನ್ನಕ್ಕೆ ಇಂದು ಒಗ್ಗರಣೆ ನೀಡಿ ಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹುಮನಾಬಾದ್ ಪಟ್ಟಣದ ಹೊರವಲಯದ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಗೆ ಎಂಎಲ್ ಸಿ ಭೀಮಾರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.