newsics.com
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಪೊಲೀಸರು ಗೃಹ ಇಲಾಖೆ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ.
ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ನಟ ದರ್ಶನ್ ಚಿಕಿತ್ಸೆಗೆಂದು ಆರು ವಾರಗಳ ಜಾಮೀನು ಪಡೆದಿದ್ದಾರೆ. ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಆಗಲೇ 10 ದಿನಗಳಾಗುತ್ತಾ ಬಂದಿದೆ. ಈಗಲೂ ದರ್ಶನ್ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ, ಶಸ್ತ್ರಚಿಕಿತ್ಸೆಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಇದೂ ಕೂಡಾ ಅವರ ತಂತ್ರಗಾರಿಕೆಯ ಭಾಗ ಎಂದೇ ಹೇಳಲಾಗುತ್ತಿದೆ.
ಹೌದು, ಈ ಬಗ್ಗೆ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಲು ಅನುಮತಿ ಕೋರಿ ರಾಜ್ಯ ಗೃಹ ಇಲಾಖೆಗೆ ನಗರ ಪೊಲೀಸ್ ಆಯುಕ್ತ ದಯಾನಂದ್ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಗೃಹ ಇಲಾಖೆ ಒಪ್ಪಿಗೆ ಸಿಕ್ಕ ಕೂಡಲೇ ಪೊಲೀಸರು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ. ಅದನ್ನು ನೋಡಿಕೊಂಡೇ ಶಸ್ತ್ರಚಿಕಿತ್ಸೆ ಬಗ್ಗೆ ತೀರ್ಮಾನಿಸಲು ದರ್ಶನ್ ಕೂಡಾ ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗುತ್ತಿದೆ.