newsics.com
ದೆಹಲಿ: ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ದೀರ್ಘ ವ್ಯಾಪ್ತಿಯ ಹೈಪರ್ಸಾನಿಕ್ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಘೋಷಿಸಿದ್ದಾರೆ.
ಶನಿವಾರದಂದು ಪರೀಕ್ಷೆ ನಡೆಸಲಾಗಿದ್ದು, ಇದರಿಂದ ದೇಶದ ರಕ್ಷಣಾ ಸಾಮರ್ಥ್ಯ ಇನ್ನಷ್ಟು ಬಲಗೊಂಡಿದೆ. ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ದೀರ್ಘ ವ್ಯಾಪ್ತಿಯ ಹೈಪರ್ಸಾನಿಕ್ ಕ್ಷಿಪಣಿಯ ಹಾರಾಟದ ಪ್ರಯೋಗವನ್ನು ಯಶಸ್ವಿಯಾಗಿ ನಡೆಸುವ ಮೂಲಕ ಭಾರತವು ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ ಇದು ಐತಿಹಾಸಿಕ ಕ್ಷಣವಾಗಿದೆ ಎಂದು ಬರೆದುಕೊಂಡಿದ್ದಾರೆ.

ಈ ಕ್ಷಿಪಣಿಯನ್ನು ಹೈದರಾಬಾದ್ನ ಡಾ ಎಪಿಜೆ ಅಬ್ದುಲ್ ಕಲಾಂ ಮಿಸೈಲ್ ಕಾಂಪ್ಲೆಕ್ಸ್ನ ಪ್ರಯೋಗಾಲಯಗಳು ಮತ್ತು ಇತರ ಡಿಆರ್ಡಿಒ ಪ್ರಯೋಗಾಲಯಗಳು ಮತ್ತು ಉದ್ಯಮ ಪಾಲುದಾರರು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ್ದಾರೆ. ವಿಶೇಷ ಅಂದರೆ ಈ ಹೈಪರ್ಸಾನಿಕ್ ಕ್ಷಿಪಣಿ ಎಲ್ಲಾ1500 ಕಿಮೀಗಿಂತ ಹೆಚ್ಚಿನ ವ್ಯಾಪ್ತಿಯ ವಿವಿಧ ಪೇಲೋಡ್ಗಳನ್ನು ಸಾಗಿಸಲು ವಿನ್ಯಾಸಗೊಳಿಸಲಾಗಿದ್ದು, ಭಾರತೀಯ ಸಶಸ್ತ್ರ ಪಡೆಗಳ ಕಾರ್ಯಾಚರಣೆಗೆ ಬಲ ತುಂಬಲಿದೆ.