Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೃದಯಾಘಾತ: ಕಾಯಕಯೋಗಿ ಶಿವಲಿಂಗೇಶ್ವರ ಶ್ರೀ ಇನ್ನಿಲ್ಲ
ಕರ್ನಾಟಕಪ್ರಮುಖ

ಹೃದಯಾಘಾತ: ಕಾಯಕಯೋಗಿ ಶಿವಲಿಂಗೇಶ್ವರ ಶ್ರೀ ಇನ್ನಿಲ್ಲ

Share
1 Min Read
SHARE

newsics.com

ಹುಬ್ಬಳ್ಳಿ: ತಾಲೂಕಿನ ಮಂಟೂರು ಅಡವಿ ಸಿದ್ಧೇಶ್ವರ ಮಠ ಹಾಗೂ ಶಿವಮೊಗ್ಗ ಜಿಲ್ಲೆ ಬಳ್ಳಿಗಾವಿ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಗಳಾಗಿದ್ದ ಶ್ರೀ ಮನಿಪ್ರ ಶಿವಲಿಂಗೇಶ್ವರ ಸ್ವಾಮೀಜಿ (82) ಭಾನುವಾರ ಬೆಳಗಿನ ಜಾವ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾದರು.

ಹೃದಯಾಘಾತಕ್ಕೊಳಗಾಗಿದ್ದ ಸ್ವಾಮೀಜಿಯವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 11 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿದ್ದ ಶ್ರೀಗಳು ಭಾನುವಾರ ಬೆಳಗಿನ ಜಾವ 1 ಗಂಟೆ ಹೊತ್ತಿಗೆ ಕೊನೆಯುಸಿರೆಳೆದರು.

ಹುಬ್ಬಳ್ಳಿ ತಾಲೂಕಿನ ಮಂಟೂರು ಹಾಗೂ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಅಡವಿ ಸಿದ್ಧೇಶ್ವರ ಮಠ,
ಹುಬ್ಬಳ್ಳಿ ಹರುಷದೇವರ ಮಠ, ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಗೆರಕೊಪ್ಪ- ಬೊಪ್ಪಗೊಂಡನಕೊಪ್ಪ ಇಂದುಧರೇಶ್ವರ ಮಠ, ಶಿಕಾರಿಪುರ ತಾಲೂಕು ಬೆಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠ ಹಾಗೂ ಬೀದರ ಜಿಲ್ಲೆ ಬಸವಕಲ್ಯಾಣ ಕೆಳಗಿ ಪೀಠದ ಪೀಠಾಧಿಪತಿಗಳಾಗಿದ್ದರು.

ಮಂಟೂರು ಗ್ರಾಮದ ಗುರುಪಾದಮ್ಮ ಶಿವಜೋಗಯ್ಯನವರ ಮಗನಾಗಿ 1943 ಜುಲೈ 2ರಂದು ಜನಸಿದ್ದ ಅವರು ಶ್ರೀಗಳು ತಮ್ಮ‌ ಬಾಲ್ಯ ವಿದ್ಯಾಭ್ಯಾಸವನ್ನು ಮಂಟೂರಿನಲ್ಲಿ ಪೂರ್ಣಗೊಳಿಸಿದ್ದರು. ಶಿವಯೋಗ ಮಂದಿರದಲ್ಲಿ ಅಧ್ಯಯನ ಹಾಗೂ ವಾರಾಣಸಿಯಲ್ಲಿ ಎಂಎ ಸಂಸ್ಕೃತ ಅಧ್ಯಯನ ಮಾಡಿದ್ದರು.

ಮಂಟೂರಿನಲ್ಲಿ ಶಿವಲಿಂಗೇಶ್ವರ ಪ್ರೌಢಶಾಲೆ ಸ್ಥಾಪಿಸಿ‌ ಮಕ್ಕಳಿಗೆ ಶಿಕ್ಷಣ ನೀಡಿದ್ದಾರೆ.
ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಅಡವಿ ಸಿದ್ಧೇಶ್ವರ ಮಠವನ್ನು ಭಕ್ತರ ದೇಣಿಗೆ ಹಾಗೂ ಅವಿರತ ಶ್ರಮದಿಂದ ಅಭಿವೃದ್ಧಿಪಡಿಸಿದ್ದಾರೆ. ಭಕ್ತರೊಂದಿಗೆ ಸೇರಿ ರಾಜ್ಯಕ್ಕೆ ಮಾದರಿಯಾಗುವಂತಹ ರಥ ನಿರ್ಮಿಸಿದ್ದಾರೆ.

ಅಲ್ಲಮಪ್ರಭು ಜನ್ಮಸ್ಥಳ ಅಭಿವೃದ್ಧಿ
ವಚನಕಾರ ಅಲ್ಲಮಪ್ರಭುವಿನ ಜನ್ಮಸ್ಥಳ
ಶಿಕಾರಿಪುರ ತಾಲೂಕು ಬೆಳ್ಳಿಗಾವಿಯ ವಿರಕ್ತಮಠದ ಅಭಿವೃದ್ಧಿಗೊಳಿಸಿದ್ದಾರೆ.
ನಶಿಸುತ್ತಿದ್ದ ಅಲ್ಲಮಪ್ರಭುವಿನ ಮನೆಯನ್ನು ಅನುಭವ ಮಂಟಪ‌ವನ್ನಾಗಿಸಲು
ಸಿದ್ಧತೆ ನಡೆಸಿದ್ದರು. ಗ್ರಂಥ ಪ್ರಕಟಣೆಗಳ ಮೂಲಕ ವಚನಗಳ ಸಂರಕ್ಷಣೆಗೆ ಮುಂದಾಗಿದ್ದರು.

ಕಾರು- ಬಸ್ ಡಿಕ್ಕಿ: ಕಾಟೇರ ಸಿನಿಮಾ ಬಾಲನಟ ರೋಹಿತ್ ಸೇರಿ ಹಲವರಿಗೆ ಗಾಯ

ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

ವಿದ್ಯುತ್ ಟ್ರಾನ್ಸ್‌ಫಾರ್ಮರ್ ಮೇಲೆ ಯುವತಿಯ ಹುಚ್ಚಾಟ, 800 ಮನೆಗಳಿಗೆ ಪವರ್ ಕಟ್, ವಿಡಿಯೋ ನೋಡಿ

TAGGED:Kayakayogi Shivalingeshwar Sri is no more
Share This Article
Facebook Twitter Copy Link Print
Previous Article ದಿನ ಭವಿಷ್ಯ… 17-11-2024, ಭಾನುವಾರ, ಹೇಗಿದೆ ನಿಮ್ಮ ಇಂದಿನ ರಾಶಿ‌ ಭವಿಷ್ಯ?
Next Article ನ.21ರಿಂದ ರಾಷ್ಟ್ರ ರಾಜಧಾನಿಯಲ್ಲೂ ಸಿಗಲಿದೆ ನಂದಿನಿ ಹಾಲು, ಮೊಸರು

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?