newsics.com
ಚಾಮರಾಜನಗರ: ಕಳೆದ ಕೆಲವು ದಿನಗಳ ಹಿಂದೆಯಷ್ಟೇ ತಾಯಿಯಿಂದ ಭಿಕ್ಷುಕಿಯೊಬ್ಬಳು ಮಗು ಅಪಹರಿಸಿ ಪರಾರಿಯಾಗಿದ್ದಳು. ಇದೀಗ ಪರಾರಿಯಾಗಿದ್ದ ಭಿಕ್ಷುಕಿಯನ್ನು ಚಾಮರಾಜನಗರ ಪೊಲೀಸರು ಬಂಧಿಸಿದ್ದಾರೆ.
ರಾಧಾ (28) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಹೌದು, ಈಕೆ ಪುಟ್ಟ ಕಂದಮ್ಮಗಳನ್ನು ಅಪಹರಿಸಿ ಭೀಕ್ಷಾಟನೆ ಮಾಡುತ್ತಿದ್ದಳು.
ಈಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಮನಗರ ಮೂಲದ ಅನಿತಾಳನ್ನು ಪರಿಚಯ ಮಾಡಿಕೊಂಡು ಅನಿತಾಳ ಮಗು ಜೊತೆಗೆ ಪರಾರಿಯಾಗಿದ್ದಳು
ಈ ಕುರಿತು ಅನಿತಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಗು ಅಪಹರಿಸಿದವಳ ಜಾಡು ಹಿಡಿದು ಕೊರಟ ಪೊಲೀಸರು ಬಸ್ ನಿಲ್ದಾಣದಲ್ಲಿ ಸಿಸಿಟಿವಿ ಕ್ಯಾಮರಾ ಪರಿಶೀಲನೆ ನಡೆಸಿ ರಾಧಾಳನ್ನು ಮೈಸೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ
ಇನ್ನು ರಾಧಾಳನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಮಗುವನ್ನು ಅಪಹರಿಸಿಕೊಂಡು ಹೋಗಿ ಕಳೆದ 4 ದಿನಗಳಿಂದ ರೈಲಿನಲ್ಲಿ ಭಿಕ್ಷಾಟನೆ ಮಾಡಿದ್ದಾಗಿ ತಿಳಿಸಿದ್ದಾಳೆ.
ಸದ್ಯ ಆರೋಪಿ ರಾಧಾಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಮಗುವನ್ನು ಮಕ್ಕಳ ಕಲ್ಯಾಣ ಸಮಿತಿ ಇಲಾಖೆಯ ಮುಂದೆ ಹಾಜರು ಪಡಿಸಲಾಗಿದೆ.