newsics.com
ಬೆಳಗಾವಿ: ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬೆಳಗಾವಿಯ ನಿಪ್ಪಾಣಿ ಕಸನಾಳ ಗ್ರಾಮದಲ್ಲಿ ನಡೆದಿದೆ.
ಹೌದು, ಕಸನಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ತರಾಗಿದ್ದು, ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ. ಇನ್ನು ತೀವ್ರ ಅಸ್ವಸ್ಥರಾಗಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲುಷಿತ ನೀರಿನ ಕುರಿತಾಗಿ ಗ್ರಾಮ ಪಂಚಾಯತಿ ನಿರ್ಲಕ್ಷ್ಯದಿಂದ ದುರ್ಘಟನೆ ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ಕಳೆದ ಎರಡು ದಿನಗಳಿಂದ ಗ್ರಾಮಸ್ಥರು ಅಸ್ವಸ್ಥಗೊಳ್ಳುತ್ತಿದ್ದಾರೆ.