newsics.com
ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ತನಿಖೆ ಎದುರಿಸಿದ್ದ ಯುವತಿ ನೇಣಿಗೆ ಶರಣಾಗಿದ್ದಾಳೆ.
ನಗರದ ಪದ್ಮನಾಭನಗರದ ಮನೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.ಜೀವಾ (33) ಅತ್ಮಹತ್ಯೆಗೆ ಶರಣಾದ ಯುವತಿ.
ಹನ್ನೊಂದು ಪುಟಗಳ ಡೆತ್ನೋಟ್ ಬರೆದಿಟ್ಟು ಜೀವಾ ಆತ್ಮಹತ್ಯೆಗೆ ಶರಣಾಗಿದ್ದು, ತನಿಖೆಯ ವಿಚಾರಣೆ ವೇಳೆ ಸಿಐಡಿ ಅಧಿಕಾರಿಗಳು ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಎರಡು ದಿನಗಳ ಹಿಂದಷ್ಟೇ ಜೀವಾ ವಿಚಾರಣೆಗೆ ಹಾಜರಾಗಿದ್ದರು. ಜೀವಾ ಆತ್ಮಹತ್ಯೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಭೋವಿ ನಿಗಮದ ಫಲಾನುಭವಿಗಳಿಗೆ ಮೆಟೀರಿಯಲ್ಸ್ ವಿತರಿಸುತ್ತಿದ್ದ ಮಾಹಿತಿ ಆಧರಿಸಿ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದರು ಎನ್ನಲಾಗಿದೆ.. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಟಾಲಿವುಡ್ ಹೀರೋಯಿನ್ Andrea jeremiah