newsics.com
ಬೆಂಗಳೂರು : ಪತ್ನಿಯ ಶೀಲ ಶಂಕಿಸಿ ಪತಿಯೊಬ್ಬ ವೇಲ್ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಭೀಕರವಾಗಿ ಕೊಂದು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ.
ಗೌಸಿಯ ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ. ಇಮ್ರಾನ್ ಎಂಬಾತನೇ ಪತ್ನಿಯನ್ನ ಕೊಲೆಗೈದು ಎಸ್ಕೇಪ್ ಅದ ಆರೋಪಿ. ಈ ಒಂದು ಕೊಲೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಂದ್ರಾ ಲೇಔಟ್ ನಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಇಮ್ರಾನ್ ಫ್ಯಾಬರಿಕ್ ಕೆಲಸ ಮಾಡಿಕೊಂಡಿದ್ದನು. ಕೊಲೆ ಮಾಡಿ ಎಸ್ಕೇಪ್ ಆಗುವಾಗ ಸಹೋದ್ಯೋಗಿಗಳ ಜೊತೆ ಇಮ್ರಾನ್ ಹಣ ಕೇಳಿದ್ದ . ಆತನ ಸಹೋದ್ಯೋಗಿಗಳು ತುಮಕೂರಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವಿಚಾರವನ್ನು ಕೆಲಸಗಾರರು ಮಾಲೀಕರಿಗೆ ಹೇಳಿದ್ದರು. ಇಮ್ರಾನ್ ಹಣ ಕೇಳಿಕೊಂಡು ಬಂದಿರುವುದಾಗಿ ಹೇಳಿದ್ರು. ಹಣ ಕೇಳಿಕೊಂಡು ಬಂದಿರುವ ವಿಚಾರವನ್ನು ಮಾಲೀಕ ಕೊಲೆಯಾದ ಗೌಸಿಯಾ ಕುಟುಂಬಸ್ಥರಿಗೆ ಹೇಳಿದ್ದರು. ಸದ್ಯ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.