newsics.com
ನವದೆಹಲಿ : ಬಾಂಗ್ಲಾದೇಶದಲ್ಲಿ ಗಲಭೆಯ ನಂತರ ಇದೀಗ ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತರ ಪರ ವಕೀಲರಾಗಿರುವ ಖ್ಯಾತ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು.
ಬಾಂಗ್ಲಾದೇಶ ರಾಜಧಾನಿಯಲ್ಲಿ ಬೃಹತ್ ಹಿಂದೂ ರ್ಯಾಲಿಯನ್ನು ನಡೆಸಿದ್ದಾರೆ, ಹಿಂದೂಗಳ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಧ್ವನಿ ಎತ್ತಿದ್ದಕ್ಕೆ ಅವರನ್ನು ಬಂಧಿಸಲಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ. ಇನ್ನು ಈ ಬಗ್ಗೆ ಎಕ್ಸ್ ಮೂಲಕ ರಾಧಾರಾಮನ್ ದಾಸ್ ಎಂಬುವವರು ಟ್ವೀಟ್ ಮಾಡಿದ್ದಾರೆ.
ಹಿಂದೂ ಸನ್ಯಾಸಿ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರ ಮುಖ್ಯ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ಬಂಧಿಸಿದ್ದಾರೆ. ಇದು ದೊಡ್ಡ ಅಘಾತ ಹಾಗೂ ಪೊಲೀಸರು ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ.